News Karnataka Kannada
Sunday, May 05 2024
ಕರ್ನಾಟಕ

ಸಾಮೂಹಿಕ ಅತ್ಯಾಚಾರ ಪ್ರಕರಣ ಇಲಾಖೆಗೆ ಸವಾಲು ;ಎಡಿಜಿಪಿ

Karnataka Police
Photo Credit :

ಮೈಸೂರು: ಎಂಬಿಏ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಪೋಲೀಸ್‌ ಇಲಾಖೆಗೆ ಸವಾಲಿನದ್ದಾಗಿದೆ ಎಂದು ಎಡಿಜಿಪಿ ಹೇಳಿದರು. ಕರ್ನಾಟಕ ಪೊಲೀಸ್ ಇಲಾಖೆ ಸಾಕಷ್ಟು ಕ್ಲಿಷ್ಟ ಪ್ರಕರಣಗಳನ್ನ ಭೇದಿಸಿದೆ. ಈ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುತ್ತೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಸಂತ್ರಸ್ತೆಯಿಂದ ಯಾವುದೇ ಮಾಹಿತಿ ಸಿಗದೆ, ಸಂತ್ರಸ್ತೆಯ ಸ್ನೇಹಿತನಿಂದ ಮಾಹಿತಿ ಪಡೆದು ಇಲಾಖೆ ವತಿಯಿಂದಲೇ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದರು.376D, 397 ಕಲಂ ಡಾಕಾಯಿತಿ ಹಾಗೂ ಗ್ಯಾಂಗ್ ರೇಪ್ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಗ್ಯಾಂಗ್ ರೇಪ್ ಸಂಬಂಧ ಐದು ಟೀಂ ಮೂಲಕ ಈಗಾಗಲೇ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಇದಕ್ಕಾಗಿಯೇ ಹೊರ ಜಿಲ್ಲೆಗಳಿಂದಲೂ ಸಿಬ್ಬಂದಿ ಕರೆಸಿದ್ದೇವೆ. ಪ್ರಕರಣ ತನಿಖೆ ವರದಿಯನ್ನ ಸರ್ಕಾರಕ್ಕೆ ವರದಿ ಮಾಡಲಾಗುತ್ತಿದೆ ಎಂದು ಹೇಳಿದರು.ಸಂತ್ರಸ್ತ ಯುವತಿಯ ಸ್ನೇಹಿತನಿಂದಲೂ ಒಂದಷ್ಟು ಮಾಹಿತಿ ಪಡೆಯಲಾಗಿದೆ. ಗ್ಯಾಂಗ್ ರೇಪ್ ಪ್ರಕರಣ ರಾತ್ರಿ 7.30 ರಿಂದ 8: 30 ರ ವೇಳೆಯಲ್ಲಿ ನಡೆದಿದೆ. ಇಂತಹ ಪ್ರಕರಣಗಳು ನಡೆಯಬಾರದು. ತನಿಖೆಯ ಪ್ರಗತಿ , ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು