News Karnataka Kannada
Saturday, May 11 2024
ಬೆಂಗಳೂರು

ಸಾರಿಗೆ ನೌಕರರ ವೇತನಕ್ಕಾಗಿ ​₹​60.82 ಕೋಟಿ ಬಿಡುಗಡೆ

Ksrtc Bus 07082021
Photo Credit :

ಬೆಂಗಳೂರು: ಕೆಎಸ್‌ಆರ್‌ಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದವರಿಗೆ ಜುಲೈ ತಿಂಗಳ ವೇತನ ಪಾವತಿಗೆ ರಾಜ್ಯ ಸರಕಾರವು ಶೇ 25ರಷ್ಟು ( ₹60.84 ಕೋಟಿ) ಅನುದಾನ ಬಿಡುಗಡೆ ಮಾಡಿದೆ. ಆದರೆ ಬಿಎಂಟಿಸಿ ನೌಕರರ ವೇತನಕ್ಕೆ ನಯಾಪೈಸೆ ಅನುದಾನ ನೀಡಿಲ್ಲ.

ಮೂರು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಂದ ಪೇಯೀಸ್‌ ರಶೀದಿಗೆ ಮೇಲು ರುಜು ಪಡೆದು ಖಜಾನೆಯಿಂದ ಹಣ ಡ್ರಾ ಮಾಡಲು ಅನುಮತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅವರು ಆದೇಶಿಸಿದ್ದಾರೆ. ಕೋವಿಡ್‌ ಮತ್ತು ಇಂಧನ ದರ ಹೆಚ್ಚಳದ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಬಸ್‌ಗಳ ಕಾರ್ಯಾಚರಣೆಯಿಂದ ನಿರೀಕ್ಷಿತ ಆದಾಯವೂ ಸಂಗ್ರಹವಾಗುತ್ತಿಲ್ಲ. ಹಾಗಾಗಿ, ಜುಲೈ ತಿಂಗಳ ವೇತನ ಪಾವತಿಗೆ 110 ಕೋಟಿ ರೂ. ಮತ್ತು 52.52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೆಸ್‌ಆರ್‌ಟಿಸಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮನವಿ ಮಾಡಿಕೊಂಡಿದ್ದರು.

ಹಾಗೆಯೇ, ಬಿಎಂಟಿಸಿ ಮತ್ತು ವಾಯುವ್ಯ ಸಾರಿಗೆ ಸಂಸ್ಥೆಯು ಜುಲೈನಿಂದ ಸೆಪ್ಟೆಂಬರ್‌ವರೆಗೆ ಅಧಿಕಾರಿ, ಸಿಬ್ಬಂದಿಗೆ ವೇತನ ನೀಡಲು ಕ್ರಮವಾಗಿ 284.14 ಹಾಗೂ 193 ಕೋಟಿ ರೂ.ಗಳಿಗೆ ಬೇಡಿಕೆ ಸಲ್ಲಿಸಿದ್ದವು. ನಾಲ್ಕು ನಿಗಮಗಳು ಒಟ್ಟು 640.61 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಕೋರಿದ್ದವು. ಪ್ರಸ್ತಾವನೆ ಪರಿಶೀಲಿಸಿದ ಸರಕಾರ, ಕೇವಲ 60.84 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು