Categories: ಕರ್ನಾಟಕ

ಸಾಲದ ಆಸೆಗೆ 24 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಕಾರವಾರ:ವ್ಯವಹಾರ ಆರಂಭಿಸಲು 60 ಲಕ್ಷ ರೂ. ಸಾಲ ಲಭಿಸುತ್ತದೆ ಎಂದುಕೊಂಡಿದ್ದ  ವ್ಯಕ್ತಿಯೊಬ್ಬ 24 ರೂ. ಲಕ್ಷ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸಂಭವಿಸಿದೆ.

 ಯಲ್ಲಾಪುರ ತಾಲೂಕಿನಹಿಟ್ಟಳ್ಳಿಯ ವಿಘ್ನೇಶ್ವರ ಹೆಗಡೆ ಎಂಬುವವರು ಆನ್ಲೈನ್ ಮಾರ್ಕೆಟಿಂಗ್ ಸಂಸ್ಥೆ ಆರಂಭಿಸಲು ಹಣಕಾಸಿನ ನೆರವಿಗೆ ಹುಡುಕಾಡುತ್ತಿದ್ದರು. ಈ ಸಂಬಂಧ ಇಂಟರ್ನೆಟ್ನಲ್ಲಿ ಹುಡುಕಾಡಿದಾಗ  www.capitalmorganfinancial.com ಎಂಬ ವೆಬ್ಸೈಟ್ ವಿಳಾಸ ಕಾಣಿಸಿತು.

ಅದರಲ್ಲಿದ್ದ ಡೇವಿಡ್ ಪ್ಯಾಟ್ರಿಕ್ ಎಂಬಾತನ ಮೊಬೈಲ್ ಸಂಖ್ಯೆಯಿತ್ತು. ಆತನಿಗೆ ಕರೆ ಮಾಡಿದಾಗ, ತನ್ನನ್ನು ಕಂಪನಿಯ ನಿರ್ದೇಶಕ ಎಂದು ಪರಿಚಯಿಸಿಕೊಂಡ. ತಮಗೆ ಹಣಕಾಸಿನ ಅವಶ್ಯಕತೆ ಇರುವ ಬಗ್ಗೆ ವಿಘ್ನೇಶ್ವರ ಹೆಗಡೆ ಆತನ ಬಳಿ ನಿವೇದಿಸಿಕೊಡರು.

ಡೇವಿಡ್ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯು ಅಮೆರಿಕ ಮೂಲದ್ದಾಗಿದೆ. 60 ಲಕ್ಷ ರೂ. ಸಾಲ ಕೊಡಿಸಲು ಸಾಧ್ಯವಿದೆ. ಹಣ ವರ್ಗಾವಣೆ ಮಾಡುವ ವಿವಿಧ ಪ್ರಕ್ರಿಯೆಗಳಿಗೆ ಹಣ ನೀಡಬೇಕಾಗುತ್ತದೆ ಎಂದು ಕತೆ ಕಟ್ಟಿದ್ದ. ಆ ಶುಲ್ಕ ಈ ಶುಲ್ಕ ಎಂದು ನಂಬಿಸಿ  ನಮ್ಮ ದೇಶದ ವಿವಿಧೆಡೆ ಇರುವ ಬ್ಯಾಂಕ್ ಖಾತೆಗಳಿಗೆ ಒಟ್ಟು 24 ಲಕ್ಷ ರೂ. ಜಮಾ ಮಾಡಿಸಿಕೊಂಡ. ಆದರೆ, ಸಾಲ ಕೊಡಲಿಲ್ಲ, ಜಮೆ ಮಾಡಿಸಿಕೊಂಡ ಹಣವನ್ನೂ ಮರಳಿಸಿಲ್ಲ. ಈಗ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರು ದೂರಿದ್ದಾರೆ. ಕಾರವಾರದ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

Desk

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago