Categories: ಕರ್ನಾಟಕ

ಸಾಲಬಾಧೆಯಿಂದ ಇಬ್ಬರು ರೈತರು ಆತ್ಮಹತ್ಯೆ

ಮದ್ದೂರು: ಸಾಲ ಬಾಧೆಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಶತಕ ದಾಟಿದ್ದು, ಮದ್ದೂರು ತಾಲೂಕಿನಲ್ಲಿ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ವಳೆಗೆರೆಹಳ್ಳಿ ಗ್ರಾಮದ ನಾಥಪ್ಪ ಉ. ಚಿಕ್ಕಮುತ್ತೇಗೌಡ (50) ಹಾಗೂ ಸಾದೊಳಲು ಗ್ರಾಮದ ಶಿವಲಿಂಗಯ್ಯ (55) ಆತ್ಮಹತ್ಯೆ ಮಾಡಿಕೊಂಡ ರೈತರು. ವಳಗೆರೆಹಳ್ಳಿ ಗ್ರಾಮದ ನಾಥಪ್ಪ ಅವರಿಗೆ 1.16 ಎಕರೆ ಜಮೀನಿದ್ದು, ರೇಷ್ಮೆ, ಭತ್ತ, ಕಬ್ಬು ಬೆಳೆಯಲು ಪಿಎಲ್ಡಿ ಬ್ಯಾಂಕ್ನಿಂದ 1.25 ಲಕ್ಷ ರೂ., ವಿಎಸ್ಎಸ್ಎನ್ಬಿ ಸೊಸೈಟಿಯಲ್ಲಿ ಬೆಳೆ ಸಾಲವಾಗಿ 25,000,  ಖಾಸಗಿಯಾಗಿ 6 ಲಕ್ಷ ರೂ. ಸಾಲ ಪಡೆದಿದ್ದರು.

ಸಾಲಗಾರರ ಒತ್ತಡ ಹೆಚ್ಚಾಗಿ ಮನನೊಂದು ಶನಿವಾರ ಬೆಳಗಿನ ಜಾವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ ಸರಸ್ವತಿ, ಇಬ್ಬರು ಗಂಡು ಮಕ್ಕಳು, ಒಬ್ಬಳು ಹೆಣ್ಣು ಮಗಳಿದ್ದಾಳೆ. ಸಾದೊಳಲು ಗ್ರಾಮದ ರೈತ ಶಿವಲಿಂಗಯ್ಯ ಅವರಿಗೆ 35 ಗುಂಟೆ ಜಮೀನಿದ್ದು, ಇದರಲ್ಲಿ ಕಬ್ಬು ಬೆಳೆ ಬೆಳೆದು, ಕಟಾವು ಮಾಡಿದ್ದರು. ಸಕಾಲಕ್ಕೆ ಕಾರ್ಖಾನೆಯು ಹಣ ನೀಡಿರಲಿಲ್ಲ ಎನ್ನಲಾಗಿದೆ.

ಮೃತ ಶಿವಲಿಂಗಯ್ಯ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಮಗಳ ಮದುವೆಗಾಗಿ 4 ಲಕ್ಷ ರೂ. ಹಾಗೂ ಕೃಷಿಗಾಗಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿ ಸಾಲ ಮಾಡಿದ್ದರು. ಸಾಲಗಾರರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಶನಿವಾರ ಬೆಳಗಿನ ಜಾವ ತನ್ನ ಜಮೀನಿನ ಬಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Desk

Recent Posts

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

11 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

14 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

15 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

37 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

49 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

58 mins ago