News Karnataka Kannada
Monday, May 13 2024
ಕರ್ನಾಟಕ

ಸಾಲಭಾದೆಯಿಂದ ವಿಷ ಸೇವಿಸಿ ರೈತ ಸಾವು

Photo Credit :

ಸಾಲಭಾದೆಯಿಂದ ವಿಷ ಸೇವಿಸಿ ರೈತ ಸಾವು

ಮಂಡ್ಯ: ಸಾಲಬಾಧೆಯಿಂದಾಗಿ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಸೋಮನಹಳ್ಳಿಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ರೈತ ರಮೇಶ (50)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಜಮೀನಿನಲ್ಲಿ ಕೃಷಿ ಮಾಡುವ ಸಲುವಾಗಿ ಸಹಕಾರ ಸಂಘದಲ್ಲಿ ಒಂದು ಲಕ್ಷ ಹಾಗೂ ಜನರ ಬಳಿ ಕೈಸಾಲವಾಗಿ ಮೂರು ಲಕ್ಷ ರೂ ಮಾಡಿದ್ದರು. ಆದರೆ ತಾವು ಸಾಲ ಮಾಡಿ ಬೆಳೆದ ಬೆಳೆ ಕೈಕೊಟ್ಟಿದ್ದರಿಂದ ಚಿಂತೆಗೀಡಾಗಿದ್ದರು. ಇದಲ್ಲದೆ ಸಾಲ ನೀಡಿದವರು ಹಿಂತಿರುಗಿಸುವಂತೆ ಒತ್ತಡ ಹೇರುತ್ತಿದ್ದರಿಂದ ಮನ ನೊಂದಿದ್ದ ರೈತ ರಮೇಶ್ ಶನಿವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ವಿಷಯ ಮನೆಯವರಿಗೆ ತಿಳಿದು ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು