ಬೆಂಗಳೂರು: ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಇದೇ ಸೋಮವಾರ ವಿಶ್ವಾಸ ಮತ ಯಾಚಿಸುವ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಇದೇ 29ಹಾಗೂ 30ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮುಂಜಾಗೃತ ಕ್ರಮವಾಗಿ 29 ಹಾಗೂ 30ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸ ಮತ ಯಾಚಿಸುವವಲ್ಲಿ ವಿಪಲವಾದ ವೇಳೆ ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಮತ್ತೇರಡು ದಿನ ಜಾರಿಗೊಳಿಸಲಾಗಿದೆ.