ಹುಬ್ಬಳ್ಳಿ: ಸುಮಲತಾ ಅವರು ಕಾಂಗ್ರೆಸ್ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂಬ ನಂಬಿಕೆ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಡ್ಯದಲ್ಲಿ ರಾಜಕೀಯಕ್ಕೆ ಇಳಿಯಲು ಸುಮಲತಾ ಬಯಸಿದ್ದರು. ಆದರೆ ಮಂಡ್ಯವನ್ನು ಈಗಾಗಲೇ ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಹೀಗಾಗಿ ಸುಮಲತಾ ಅವರಿಗೆ ಟಿಕೆಟ್ ನೀಡಲು ಸಾಧ್ಯವಾಗಿಲ್ಲ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಹೇಳಿದರು.
ಸುಮಲತಾ ಅವರೊಂದಿಗೆ ನಾನು ಈಗಾಗಲೇ ಚರ್ಚಿಸಿದ್ದೇನೆ. ಆದರೆ ಅವರೊಂದಿಗೆ ಮಾತನಾಡುವಂತೆ ನನಗೆ ಪಕ್ಷ ಸೂಚಿಸಿಲ್ಲ ಎಂದರು.