ಬೆಂಗಳೂರು, ;ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯುವ ಕೋವಿಡ್ ಸಂಬಂಧಿತ ಸಭೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಒಪ್ಪಿಗೆ ಸಿಕ್ಕರೆ ಸೆಪ್ಟೆಂಬರ್ ಮೊದಲ ವಾರದಲ್ಲೇ ಶಾಲೆಗಳು ಆರಂಭಿಸುವ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೀಡಿದ್ದಾರೆ.
ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಜೆ ನಡೆಯುವ ಸಭೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಅನುಮತಿ ಸಿಗುವ ನಿರೀಕ್ಷೆ ಇದೆ ಎಂದರು.ಈ ಸಭೆಯಲ್ಲಿ ಶಾಲೆಗಳನ್ನು ಆರಂಭಿಸಲು ಒಪ್ಪಿಗೆ ಸಿಕ್ಕರೆ ಸೆಪ್ಟೆಂಬರ್ ಮೊದಲ ವಾರದಲ್ಲೇ ೧ ರಿಂದ ೮ನೇ ತರಗತಿಗಳನ್ನು ಆರಂಭಿಸುವ ಇಂಗಿತವನ್ನು ಅವರು ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯದಲ್ಲಿ ೯, ೧೦ ಸೇರಿದಂತೆ ಪಿಯುಸಿ ತರಗತಿಗಳು ಆರಂಭವಾಗಿ ಯಶಸ್ವಿಯಾಗಿ ನಡೆದಿವೆ. ಹಾಗಾಗಿ ಪ್ರಾಥಮಿಕ ಶಾಲೆಗಳ ಆರಂಭಕ್ಕೂ ಮುಖ್ಯಮಂತ್ರಿಗಳು ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಸಚಿವ ನಾಗೇಶ್ ಹೇಳಿದರು.
ಸೆಪ್ಟೆಂಬರ್ ಮೊದಲ ವಾರದಲ್ಲಿ ಶಾಲೆಗಳ ಆರಂಭ;ಸಚಿವ ನಾಗೇಶ್ ಸುಳಿವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.