ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕರಂದಕ್ಕಾಡ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ತಳಂಗರೆ ಖಾಸಿ ಲೈನ್ ನ ಮುಜೀಬ್ ರಹಮಾನ್ ( ೪೨) ಎಂದು ಗುರುತಿಸಲಾಗಿದೆ. ಹೊಸ ಬಸ್ಸು ನಿಲ್ದಾಣ ಸಮೀಪದ ಮಳಿಗೆಯೊಂದರ ಮಲಕರಾಗಿದ್ದರು.
ರಾತ್ರಿ ೧೧ ಗಂಟೆಗೆ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು , ಮುಜೀಬ್ ರಹಮಾನ್ ಸ್ಥಳದಲ್ಲೇ ಮೃತಪಟ್ಟರು. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ