Categories: ಕರ್ನಾಟಕ

ಹುಲಿ ಉಗುರು ಮಾರಾಟ ಯತ್ನ: ರೆಡ್‌ ಹ್ಯಾಂಡಾಗಿ ಬಂಧನ

ಚಾಮರಾಜನಗರ: ಹುಲಿ ಉಗುರು ಮಾರಾಟ  ಮಾಡಲು ಪ್ರಯತ್ನಿಸುತಿದ್ದ   ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೊಳ್ಳೇಗಾಲ  ದೊಡ್ಡ ನಾಯಕರ ಬೀದಿ ನಿವಾಸಿ ಆಟೋ ಚಾಲಕ ನಾರಾಯಣಿ(33) ಹಾಗೂ ಹೊಸ ಪೋಸ್ಟ್ ಆಫೀಸ್ ರಸ್ತೆ ನಿವಾಸಿ ನಯೀಮ್ ಪಾಷಾ (34) ಎಂದು ಗುರುತಿಸಲಾಗಿದೆ. 

ಅರಣ್ಯ ಸಂಚಾರಿ ದಳ ಪಿಎಸ್ಐ ಮುದ್ದು ಮಾದೇವ ತಂಡ ಬೇರೆ ಪ್ರಕರಣದ ಸಂಬಂಧ ಮಾಹಿತಿಗಾಗಿ ಪಟ್ಟಣದ ಅಣಗಳ್ಳಿ ರಸ್ತೆಯಲ್ಲಿ ಬುಧವಾರ ಸಂಜೆ ತೆರಳುತಿದ್ದಾಗ ಜೀಪ್ ಎದುರು ಬಂದ  ಆಟೋ ರಿಕ್ಷಾವನ್ನು ಗಮನಿಸಿದ್ದಾರೆ. ಪೊಲೀಸರನ್ನು ನೋಡಿದ  ಆಟೋದಲ್ಲಿದ್ದ ಇಬ್ಬರು   ಪರಾರಿಯಾಗಲು  ಪ್ರಯತ್ನಿಸಿದ್ದಾರೆ.  ಅನುಮಾನಗೊಂಡ ಪೊಲೀಸರು ಅವರನ್ನು ವಿಚಾರಿಸಿದಾಗ  ಸಮರ್ಪಕ ಉತ್ತರ ನೀಡಿಲ್ಲ. ನಂತರ ಇಬ್ಬರನ್ನೂ ಪರಿಶೀಲಿಸಿದಾಗ ಆರೋಪಿ ನಯೀಮ್ ಪಾಷಾನ ಹತ್ತಿರ ಎರಡು ಹುಲಿ ಉಗುರುಗಳು ದೊರಕಿವೆ.  ಈ ಉಗುರುಗಳು  ನನ್ನದಲ್ಲ, 3 ತಿಂಗಳಿನ ಹಿಂದೆ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯಿಂದ ಡಾಲರ್ ಮಾಡಿಸಿಕೊಳ್ಳಲು ಹುಲಿ ಉಗುರು ಖರೀದಿ ಮಾಡಿದ್ದೆ ಎಂದು ಆರೋಪಿ ತಿಳಿಸಿದ್ದು , ಹೆಚ್ಚಿನ ಹಣಕ್ಕೆ  ಅಣಗಳ್ಳಿ ಬಳಿ ಮಾರಾಟಕ್ಕೆ ಬಂದಿದ್ದೆ  ಎಂದು ನಾರಾಯಣಿ ಒಪ್ಪಿಕೊಂಡಿದ್ದಾನೆ.

ಬಂಧಿತರಿಂದ 1 ಆಟೋ, 2 ಹುಲಿ‌ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Desk

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

42 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

49 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

60 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago