ಬೆಂಗಳೂರು : ಹೊಸ ಶೈಕ್ಷಣಿಕ ನೀತಿ ಅನ್ವಯ ಇನ್ನು ಮುಂದೆ ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯನ್ನು ಕಡ್ಡಾಯಗೊಳಿಸಿದೆ.
ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು,ಪ್ರೌಢಶಾಲೆ ಶಿಕ್ಷಕರಾಗಲು ಇನ್ಮುಂದೆ ಸ್ನಾತಕೋತ್ತರ ಪದವಿ ಕಡ್ಡಾಯದ ಜತೆಗೆ ಹಲವು ಮಾರ್ಪಾಡುಗಳಾಗಲಿವೆ ಎಂದು ತಿಳಿಸಿದ್ದಾರೆ.
ಆದರೆ ಕೇಂದ್ರಸರ್ಕಾರದ ಈ ಕ್ರಮದಿಂದ ಅನುದಾನಿತ ಶಾಲೆಗಳಲ್ಲಿ ಕಾಯಂ ಹುದ್ದೆ ನಿರೀಕ್ಷೆಯಲ್ಲಿದ್ದ ಸಾವಿರಾರು ಶಿಕ್ಷಕರಿಗೆ ಬಿಗ್ ಶಾಕ್ ಎದುರಾಗಿದೆ.
ರಾಜ್ಯದಲ್ಲಿ 4,700 ಕ್ಕೂ ಅಧಿಕ ಅನುದಾನಿತ ಪ್ರೌಢಶಾಲೆಗಳಿದ್ದು, 2015 ರಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಲ್ಲ.