News Karnataka Kannada
Monday, May 06 2024
ಶಿವಮೊಗ್ಗ

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್‌ ದೆಹಲಿಗೆ

Renukacharya M P 21 7 21
Photo Credit :

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ವದಂತಿ ತೀವ್ರವಾಗಿ ಹಬ್ಬಿರುವ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮಂಗಳವಾರ ರಾತ್ರಿ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ನಡೆಯುತ್ತಿರುವ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗವಾಗಿ ರೇಣುಕಾಚಾರ್ಯ ಅವರು ದೆಹಲಿಗೆ ಆಗಮಿಸಿದ್ದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ಹಿನ್ನಲೆಯಲ್ಲಿ ಅವರು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಆಗುವ ಸಾಧ್ಯತೆ ಇದೆ. ಅಲ್ಲದೆ ಅರುಣ್ ಸಿಂಗ್ ಅವರ ಮೂಲಕ ಇತರೆ ವರಿಷ್ಠರ ಭೇಟಿಗೂ ಪ್ರಯತ್ನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಭೇಟಿ ವೇಳೆ ಯಡಿಯೂರಪ್ಪ ಅವರಿಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನ‌‌ ಬಿಟ್ಟು ಕೊಡುವಂತೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯಡಿಯೂರಪ್ಪ ತಮ್ಮ ಸ್ಥಾನ ಉಳಿಸಿಕೊಳ್ಳಲು ಹಲವು ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಅದೇ ಕಾರಣಕ್ಕೆ ಅವರೇ ರೇಣುಕಾಚಾರ್ಯ ಅವರನ್ನು ದೆಹಲಿಗೆ ಕಳುಹಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ‌ ಹಿಂದೆ ಶಾಸಕರ ತಂಡದೊಂದಿಗೆ ದೆಹಲಿಗೆ ಬರುವುದಾಗಿ ರೇಣುಕಾಚಾರ್ಯ ಹೇಳಿದ್ದರು. ಆದರೆ ಈಗ ದಿಢೀರನೇ ಒಬ್ಬರೇ ದೆಹಲಿಗೆ ಆಗಮಿಸಿರುವುದು ಕುತೂಹಲ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು