Categories: ಕರ್ನಾಟಕ

1ನೇ ತರಗತಿಯಿಂದ ಶಾಲೆ– ಶೀಘ್ರ ಮುಂದಿನ ಯೋಜನೆ: ನಾಗೇಶ್‌

ಬೆಂಗಳೂರು: 6ರಿಂದ 12ನೇ ತರಗತಿಯವರೆಗೆ ಶಾಲೆಗಳು ನಡೆಸಿದ ಅನುಭವಗಳ ಆಧಾರದ ಮೇಲೆ 1ನೇ ತರಗತಿಯಿಂದ ಶಾಲೆಗಳ ಆರಂಭಕ್ಕೆ ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಹಳ್ಳಿಗಳಲ್ಲಿ ಶೂನ್ಯ ಕೊರೋನಾ ಪಾಸಿಟಿವ್ ಪ್ರಕರಣಗಳಿದ್ದು ಅಂತಹ ಕಡೆಗಳಲ್ಲಿ ಶಾಲೆಗಳನ್ನು ಆರಂಭ ಮಾಡುವಂತೆ ಸಾರ್ವಜನಿಕರು, ಶಿಕ್ಷಕರು, ಪೋಷಕರು ಬೇಡಿಕೆಯಿಟ್ಟ ಕಾರಣ ಇಂದು 6ರಿಂದ 8ನೇ ತರಗತಿಯವರೆಗೆ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದಿದ್ದಾರೆ.

ಇಂದಿನಿಂದ ಮೂರು ದಿನ ಶಾಲೆಗಳನ್ನು ನಡೆಸಿದ ನಂತರ ಮತ್ತೆ ಮೂರು ದಿನ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ರಜೆ ಸಿಗುತ್ತಿದೆ, ಆಗ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ನಮಗೆ ಅಭಿಪ್ರಾಯಗಳು ಸಿಗುತ್ತವೆ. ಅವೆಲ್ಲವನ್ನೂ ತೆಗೆದುಕೊಂಡು ಮುಂದಿನ ಸೋಮವಾರದಿಂದ ಮುಂದಿನ ಯೋಜನೆ ರೂಪಿಸುತ್ತೇವೆ ಎಂದು ತಿಳಿಸಿದ್ದಾರೆ.

ಶಾಲೆಗಳ ಪುನರಾರಂಭಕ್ಕೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಶಿಕ್ಷಣ ಅಧಿಕಾರಿಗಳು, ಗ್ರಾಮ ಪಂಚಾಯತಿಯಿಂದ ಹಿಡಿದು ಮಹಾನಗರವರೆಗೆ ನಮಗೆ ಸಹಕಾರ ಸಿಕ್ಕಿದೆ. ಇದುವರೆಗೆ ರಾಜ್ಯದಲ್ಲಿ ಶೇಕಡಾ 98ಕ್ಕಿಂತ ಹೆಚ್ಚು ಮಕ್ಕಳಿಗೆ ಲಸಿಕೆ ನೀಡಿರುವುದರಿಂದ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಚೆನ್ನಾಗಿ ಹೋಗಿ ಮುಂದಿನ ದಿನಗಳಲ್ಲಿ ತರಗತಿಗಳನ್ನು ಸರಾಗವಾಗಿ ನಡೆಸಿಕೊಂಡು ಹೋಗಬಹುದು ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

Sampriya YK

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago