News Karnataka Kannada
Saturday, May 11 2024
ಕರ್ನಾಟಕ

ಲಸಿಕೆ ಪಡೆಯಲು ಜನರ ತಳ್ಳಾಟ ನೂಕಾಟ

Lasike Karwar
Photo Credit :

ಕಾರವಾರ: ರಾಜ್ಯಾದ್ಯಂತ ಕೊರೊನಾ ಲಸಿಕೆಯ ಅಭಾವ ಮಿತಿಮೀರಿದ್ದು ಗಡಿ ಜಿಲ್ಲೆ ಉತ್ತರ ಕನ್ನಡವನ್ನೂ ಬಿಟ್ಟಿಲ್ಲ. 15 ಲಕ್ಷ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಇದುವರೆಗೆ 3,81000 ಜನ ಮೊದಲ ಹಂತದ ಲಸಿಕೆ ಪಡೆದಿದ್ದಾರೆ. 77000 ಜನ ಎರಡನೇ ಹಂತದ ಲಸಿಕೆ ಸಹ ನೀಡಲಾಗಿದೆ. ಆದರೆ ಇದೀಗ ರಾಜ್ಯ ಹಾಗೂ ಕೇಂದ್ರದಿಂದ ಬರಬೇಕಾದ ಪ್ರಮಾಣದಲ್ಲಿ ಲಸಿಕೆ ಬರುತ್ತಿಲ್ಲ.
ಕಳೆದ ಮೂರು ದಿನದಿಂದ ಜಿಲ್ಲೆಯಲ್ಲಿ ಲಸಿಕೆ ಅಭಾವ ಸಹ ಆಗಿದ್ದು, ಜಿಲ್ಲಾಡಳಿತದಿಂದ ನಿಗದಿ ಮಾಡಿದವರನ್ನು ಹೊರತುಪಡಿಸಿ ಉಳಿದವರಗೆ ನೀಡುತ್ತಿಲ್ಲ. ಆದರೆ ನಿಗದಿ ಮಾಡಿದ ಜನರಿಗೂ ಇದೀಗ ಲಸಿಕೆ ಅಭಾವದ ಬಿಸಿ ತಟ್ಟಿದ್ದು ಇಂದು ಕಾರವಾರದಲ್ಲಿ ವ್ಯಾಕ್ಸಿನ್ ಖಾಲಿಯಾಗಿ ಜನ ವ್ಯಾಕ್ಸಿನ್ ಗಾಗಿ ತಳ್ಳಾಟ ನೂಕಾಟ ನಡೆಸಿದರು. ಇಂದು ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ನೀಡುತಿದ್ದು, ಹೆಚ್ಚಿನ ಜನ ವ್ಯಾಕ್ಸಿನ್ ತೆಗೆದುಕೊಳ್ಳಲು ಆಗಮಿಸಿದ್ದರು. ಆದರೆ ಲಸಿಕಾ ಕೇಂದ್ರದಲ್ಲಿ 150 ಡೋಸ್ ಮಾತ್ರ ಇದ್ದು ಐನೂರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಇದರಿಂದಾಗಿ ನೂಕು ನುಗ್ಗಾಟ ನಡೆದಿದ್ದು ಜನ ಲಸಿಕಾ ಕೇಂದ್ರದಲ್ಲಿ ಬಾಗಿಲು ಮುರಿದು ಒಳಬರಲು ಪ್ರಯತ್ನಿಸಿದರು.
ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸಿ ಸಮಾಧಾನಪಡಿಸಿ ಲಸಿಕೆಯ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟ ನಂತರ ಜನರು ಲಸಿಕಾ ಕೇಂದ್ರದಿಂದ ತೆರಳಿದರು. ಸದ್ಯ ಜಿಲ್ಲೆಗೆ ಬರಬೇಕಾದ ಲಸಿಕೆ ಕಳೆದ ಎರಡು ದಿನದಿಂದ ಜಿಲ್ಲೆಗೆ ಆಗಮಿಸಿಲ್ಲ. ಹೀಗಾಗಿ ಬಹುತೇಕ ಲಸಿಕಾ ಕೇಂದ್ರಗಳು ಮುಚ್ಚಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು