ಕಾರವಾರ: ರಾಜ್ಯಾದ್ಯಂತ ಕೊರೊನಾ ಲಸಿಕೆಯ ಅಭಾವ ಮಿತಿಮೀರಿದ್ದು ಗಡಿ ಜಿಲ್ಲೆ ಉತ್ತರ ಕನ್ನಡವನ್ನೂ ಬಿಟ್ಟಿಲ್ಲ. 15 ಲಕ್ಷ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಇದುವರೆಗೆ 3,81000 ಜನ ಮೊದಲ ಹಂತದ ಲಸಿಕೆ ಪಡೆದಿದ್ದಾರೆ. 77000 ಜನ ಎರಡನೇ ಹಂತದ ಲಸಿಕೆ ಸಹ ನೀಡಲಾಗಿದೆ. ಆದರೆ ಇದೀಗ ರಾಜ್ಯ ಹಾಗೂ ಕೇಂದ್ರದಿಂದ ಬರಬೇಕಾದ ಪ್ರಮಾಣದಲ್ಲಿ ಲಸಿಕೆ ಬರುತ್ತಿಲ್ಲ.
ಕಳೆದ ಮೂರು ದಿನದಿಂದ ಜಿಲ್ಲೆಯಲ್ಲಿ ಲಸಿಕೆ ಅಭಾವ ಸಹ ಆಗಿದ್ದು, ಜಿಲ್ಲಾಡಳಿತದಿಂದ ನಿಗದಿ ಮಾಡಿದವರನ್ನು ಹೊರತುಪಡಿಸಿ ಉಳಿದವರಗೆ ನೀಡುತ್ತಿಲ್ಲ. ಆದರೆ ನಿಗದಿ ಮಾಡಿದ ಜನರಿಗೂ ಇದೀಗ ಲಸಿಕೆ ಅಭಾವದ ಬಿಸಿ ತಟ್ಟಿದ್ದು ಇಂದು ಕಾರವಾರದಲ್ಲಿ ವ್ಯಾಕ್ಸಿನ್ ಖಾಲಿಯಾಗಿ ಜನ ವ್ಯಾಕ್ಸಿನ್ ಗಾಗಿ ತಳ್ಳಾಟ ನೂಕಾಟ ನಡೆಸಿದರು. ಇಂದು ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ನೀಡುತಿದ್ದು, ಹೆಚ್ಚಿನ ಜನ ವ್ಯಾಕ್ಸಿನ್ ತೆಗೆದುಕೊಳ್ಳಲು ಆಗಮಿಸಿದ್ದರು. ಆದರೆ ಲಸಿಕಾ ಕೇಂದ್ರದಲ್ಲಿ 150 ಡೋಸ್ ಮಾತ್ರ ಇದ್ದು ಐನೂರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಇದರಿಂದಾಗಿ ನೂಕು ನುಗ್ಗಾಟ ನಡೆದಿದ್ದು ಜನ ಲಸಿಕಾ ಕೇಂದ್ರದಲ್ಲಿ ಬಾಗಿಲು ಮುರಿದು ಒಳಬರಲು ಪ್ರಯತ್ನಿಸಿದರು.
ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸಿ ಸಮಾಧಾನಪಡಿಸಿ ಲಸಿಕೆಯ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟ ನಂತರ ಜನರು ಲಸಿಕಾ ಕೇಂದ್ರದಿಂದ ತೆರಳಿದರು. ಸದ್ಯ ಜಿಲ್ಲೆಗೆ ಬರಬೇಕಾದ ಲಸಿಕೆ ಕಳೆದ ಎರಡು ದಿನದಿಂದ ಜಿಲ್ಲೆಗೆ ಆಗಮಿಸಿಲ್ಲ. ಹೀಗಾಗಿ ಬಹುತೇಕ ಲಸಿಕಾ ಕೇಂದ್ರಗಳು ಮುಚ್ಚಿವೆ.
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.