ನವದೆಹಲಿ: ಕೃಷ್ಣ ರಾಜ ಸಾಗರ ಜಲಾಶಯದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಜಲಾಶಯಕ್ಕೆ ಅಪಾಯವಿದೆ. ಹಾಗಾಗಿ ಇದನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಮಂಗಳವಾರ ಭೇಟಿ ಮಾಡಿದ ಅವರು, ಈ ಸಂಬಂಧ ಸುದೀರ್ಘ ಚರ್ಚೆ ನಡೆಸಿದರಲ್ಲದೆ ಗಣಿಗಾರಿಕೆಯಿಂದ ಕೆಆರ್ ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಜನತೆಗೆ ತೊಂದರೆ ಆಗಿದ್ದು ರೈತರ ಜೀವನಾಡಿ ಎಂದು ಹೆಸರಾಗಿರುವ ಪ್ರಮುಖ ಜಲಾಶಯಕ್ಕೆ ಅಪಾಯ ಎದುರಾಗಿದೆ. ಅಲ್ಲದೆ ಕ್ವಾರಿಗಳಲ್ಲಿ ಬಳಸುವ ಸ್ಫೋಟಕಗಳಿಂದಾಗಿ ಇತ್ತೀಚೆಗಷ್ಟೇ ಗೋಡೆ ಕುಸಿದಿರುವುದು ಅಪಾಯದ ಕರೆಗಂಟೆಯಾಗಿದೆ ಎಂದು ಅವರು ವಿವರಿಸಿದರು.ಗಣಿಕಾರಿಕೆಯಿಂದ ಜಲಾಶಯದ ಕಟ್ಟಡಕ್ಕೆ ಉಂಟಾಗಲಿರುವ ಪರಿಣಾಮದ ಕುರಿತು ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವಂತೆಯೂ ಅವರು ಒತ್ತಾಯಿಸಿದರು. ಇದಕ್ಕೆ ಸಕಾರಾಥ್ಮಕವಾಗಿ ಸ್ಪಂದಿಸಿದ ಶೆಖಾವತ್ ಅವರು ಪರಿಶೀಲಿಸುವುದಾಗಿ ತಿಳಿಸಿದರು.
ಗಣಿಗಾರಿಕೆಯಿಂದ ಕೆಆರ್ಎಸ್ ರಕ್ಷಿಸಿ ಎಂದು ಸಚಿವರಿಗೆ ಮೊರೆಯಿಟ್ಟ ಸಂಸದೆ ಸುಮಲತ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.