News Karnataka Kannada
Sunday, May 05 2024
ಕರ್ನಾಟಕ

23ರಿಂದ ಪ್ರೌಢಶಾಲೆಗಳು ಪುನರಾರಂಭ: 15 ದಿನ ಪುನಶ್ಚೇತನ ಚಟುವಟಿಕೆ

B C Nagesh 20082021
Photo Credit :

ಬೆಂಗಳೂರು: ‘ಇದೇ 23ರಿಂದ ಪ್ರೌಢಶಾಲೆಗಳು ಪುನರಾರಂಭವಾಗಲಿದ್ದು, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲ 15 ದಿನ ಪುನಶ್ಚೇತನ ಚಟುವಟಿಕೆ ನಡೆಸಲು ಸೂಚಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ನಗರದಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಯುತ್ತಿರುವ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪುನಶ್ಚೇತನ ಚಟುವಟಿಕೆ ನಡೆಸಿ ಮಕ್ಕಳನ್ನು ಶಾಲಾ ವಾತಾವರಣಕ್ಕೆ ಮರಳಿ ತರುವ ಕೆಲಸವನ್ನು ಶಿಕ್ಷಕರು, ಉಪನ್ಯಾಸಕರು ಮಾಡಬೇಕು’ ಎಂದು ಅವರು ಹೇಳಿದರು.

‘ಶಾಲೆ, ಕಾಲೇಜು ಆರಂಭವಾಗದೆ ಭೌತಿಕ ತರಗತಿಗಳಿಂದ ದೂರ ಉಳಿದಿದ್ದಾರೆ. ಅವರು ತರಗತಿಗೆ ಮರಳುತ್ತಿದ್ದಂತೆ ಪಠ್ಯ ಬೋಧನೆ ಶುರು ಮಾಡದೆ ಕೋವಿಡ್ ಸಂದರ್ಭದ ಅನುಭವಗಳು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ಏನು ಮಾಡುತ್ತಿದ್ದರು, ಯಾವ ರೀತಿ ಕಲಿಕಾ ಕಾರ್ಯದಲ್ಲಿ ತೊಡಗಿದ್ದರು ಎಂಬಿತ್ಯಾದಿ ವಿಚಾರಗಳನ್ನು ಚರ್ಚಿಸಬೇಕು’ ಎಂದರು.

‘ಉಳಿದ ತರಗತಿಗಳ ಮಕ್ಕಳನ್ನು ಶಾಲೆಗೆ ಕಳುಹಿಸಲೂ ಪೋಷಕರು ಉತ್ಸುಕರಾಗಿದ್ದಾರೆ. ಮಕ್ಕಳೂ ಶಾಲೆಗೆ ಬರಲು ಸಿದ್ಧರಿದ್ದಾರೆ. ಈ ಸಂಬಂಧ ಸ್ವತಃ ನನಗೇ ಸಾಕಷ್ಟು ಮಕ್ಕಳು ಪೋಷಕರು ಕರೆ ಮಾಡಿ ಹೇಳುತ್ತಿದ್ದಾರೆ. 9ರಿಂದ 12ನೇ ತರಗತಿ ಆರಂಭದ ದಿನಗಳು ಯಶಸ್ವಿಯಾದರೆ ಇತರೆ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಳ್ಳಲು ಅನುಕೂಲವಾಗುತ್ತದೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು