ಬೆಂಗಳೂರು: ದೇಶದೆಲ್ಲೆಡೆ ಕೋವಿಡ್ ಅರ್ಭಟ ಜೋರಾಗಿದೆ. ರಾಜ್ಯದಲ್ಲಿ ಜೆ ಎನ್ 1 ತಳಿ ವೈರಸ್ ನ 35 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲಿಯೇ 20 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 20 ಜೆಎನ್1 ಕೇಸ್ ಪತ್ತೆಯಾಗಿವೆ. ಉಳಿದಂತೆ ಮೈಸೂರು 4, ಮಂಡ್ಯ 3, ರಾಮನಗರ, ಬೆಂಗಳೂರು ಗ್ರಾಮಾಂತರ, ಕೊಡಗು ಹಾಗೂ ಚಾಮರಾಜನಗರದಲ್ಲಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಜೆಎನ್.1 ಉಪತಳಿ ಸೋಂಕಿತರು ಪತ್ತೆಯಾಗಿದ್ದಾರೆ.
ಇನ್ನು ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಸದ್ಯಕ್ಕಿಲ್ಲ. ಮತ್ತೆ ನಾಳಿನ ಸಭೆ ಬಳಿಕ ಹೆಚ್ಚಿನ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಕೊರೊನಾ ಉಪತಳಿ JN.1 ಜನರಲ್ಲಿ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದ್ದು ಕೊರೊನಾ ಟೆಸ್ಟಿಂಗ್ ಹೆಚ್ಚಳ ಮಾಡ್ತಿದೆ. ರಾಜ್ಯದಲ್ಲಿ ಕೊರೊನಾ ಕೇಂದ್ರಬಿಂದುವಾಗಿರುವ ರಾಜಧಾನಿಯಲ್ಲೂ ಕೊರೊನಾ ಟೆಸ್ಟಿಂಗ್ ಹೆಚ್ಚಳ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ.