ಬೆಳಗಾವಿ : ಕಾಲೇಜು ಕಾಂಪೌಂಡ್ ಗೆ ಅಳವಡಿಸಿದ್ದ ಗೇಟ್ ಶಿಥಿಲಗೊಂಡು ಬಿದ್ದು ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
ನಗರದ ಆರ್.ಡಿ.ಕಾಲೇಜಿನ ಗೇಟ್ ಬಳಿ ಇಂದು ನಡೆದುಕೊಂಡು ಹೋಗುತಿದ್ದಾಗ ಮಳೆಗೆ ಶಿಥಿಲಗೊಂಡಿದ್ದ ಕಾಂಪೌಂಡ್ ನ ಗೇಟ್ ಬಿದ್ದಿದೆ. ಗೇಟ್ ಬಿದ್ದು ಅದರ ಅಡಿಯಲ್ಲಿ ಸಿಲುಕಿಕೊಂಡ 10 ವರ್ಷದ ಬಾಲಕ ಸೂಫಿಯಾನ್ ರಾಜು ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಗೇಟ್ ಬಿದ್ದಿದ್ದು ಸರಿಯಾಗಿ ಜೋಡಣೆ ಮಾಡದ ಕಾರಣ ಮಳೆಯಲ್ಲಿ ಬಿದ್ದಿದೆ.
ನಗರದ ಇಂದಿರಾನಗರ ನಿವಾಸಿ ಸೂಫಿಯಾನ್ ಸಾವನ್ನಪ್ಪಿದ್ದು, ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.