Categories: ಬೆಳಗಾವಿ

ಜಿಲ್ಲೆಯಾದ್ಯಂತ ‘ಬೆಳಕಿನ ಹಬ್ಬ’ ದೀಪಾವಳಿ ಆಚರಣೆಗೆ ಸಿದ್ಧತೆ

ಬೆಳಗಾವಿ : ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ‘ಬೆಳಕಿನ ಹಬ್ಬ’ ದೀಪಾವಳಿಯನ್ನು ಈ ಬಾರಿ ಸಂಭ್ರಮ-ಸಡಗರದಿಂದ ಆಚರಿಸಲು ಜನರು ಸಿದ್ಧತೆ ಮಾಡಿಕೊಂಡಿದ್ದಾರೆ. ಮನೆಗಳಲ್ಲಿ ಆಕರ್ಷಕ ಆಕಾಶಬುಟ್ಟಿಗಳು ತೂಗಾಡುತ್ತಿದ್ದು, ಸಡಗರದ ಸಂದೇಶವನ್ನು ಸಾರುತ್ತಿವೆ. ಹಬ್ಬವು ಕೊರೊನಾ ಸಾಂಕ್ರಾಮಿಕದ ಆತಂಕ ದೂರ ಮಾಡಿ ಹೊಸಬೆಳಕು ನೀಡಲಿ ಎಂಬ ಆಶಯದಲ್ಲಿ ಜನರಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಮನೆಗಳು, ಅಂಗಡಿಗಳು, ಕೆಲಸದ ಸ್ಥಳಗಳಲ್ಲಿ ಲಕ್ಷ್ಮಿ ಪೂಜೆ ಮಾಡುವುದು ವಿಶೇಷ. ಇದಕ್ಕಾಗಿ ಜನರು ಮಂಗಳವಾರ ಸಿದ್ಧತೆ ಮಾಡಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಅವರು ಮುಗಿಬಿದ್ದಿದ್ದರಿಂದಾಗಿ, ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂತು. ವಿವಿಧ ಮಾದರಿಯ, ವಿನ್ಯಾಸದ ಮತ್ತು ಬಣ್ಣದ ಆಕಾಶ ಬುಟ್ಟಿಗಳು, ಹಣತೆಗಳು, ಬಣ್ಣ ಬಣ್ಣದ ರಂಗೋಲಿ ಪುಡಿಗಳು, ಪೂಜಾ ಸಾಮಗ್ರಿಗಳು, ಹೊಸ ಬಟ್ಟೆಗಳ ಖರೀದಿಯಲ್ಲಿ ಜನರು ತೊಡಗಿದ್ದರು.

ಲಕ್ಷ್ಮಿ ಪೂಜೆ ಹಿನ್ನೆಲೆಯಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇತ್ತು. ಎಂದಿಗಿಂತ ಸರಾಸರಿ ಶೇ 20ರಷ್ಟು ಬೆಲೆ ಹೆಚ್ಚಾಗಿತ್ತು. ಬೆಲೆ ಏರಿಕೆಯ ನಡುವೆಯೂ ಜನರು ಅಗತ್ಯ ವಸ್ತುಗಳನ್ನು ಖರೀದಿಸಿದರು. ಪೂಜೆ ಬಳಿಕ ಸಿಹಿ ಹಂಚುವುದು ಅಥವಾ ಸಿಹಿ ತಿನಿಸುಗಳ ಡಬ್ಬಿಗಳನ್ನು ಉಡುಗೊರೆಯಾಗಿ ಕೊಡುವುದು ಇಲ್ಲಿನ ಸಂಪ್ರದಾಯ. ಹೀಗಾಗಿ, ಸಿಹಿ ತಿನಿಸುಗಳಿಗೂ ಬೇಡಿಕೆ ಕಂಡುಬಂದಿದೆ.

ಮನೆಗಳ ಮುಂದೆ ಅಕಾಶಬುಟ್ಟಿಗಳನ್ನು ಕಟ್ಟಿ, ದೀಪಾಲಂಕಾರ ಮಾಡುವುದು ಸಾಮಾನ್ಯ. ಹೀಗಾಗಿ, ಹಲವು ಬಣ್ಣ ಹಾಗೂ ವಿನ್ಯಾಸದ ಅಕಾಶಬುಟ್ಟಿಗಳು ಮಾರುಕಟ್ಟೆಗೆ ಬಂದಿವೆ. ಇವುಗಳ ಬೆಲೆ ಸರಾಸರಿ ₹ 100ರಿಂದ ₹2,500ವರೆಗೂ ಇದೆ.

ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲ್ಲೂಕುಗಳಲ್ಲಿ ಮನೆಗಳ ಬಳಿ ಅಥವಾ ಗಲ್ಲಿಯಲ್ಲಿ ಮಕ್ಕಳು ಕೋಟೆ ಮಾದರಿ ಕಟ್ಟಿ ಪ್ರದರ್ಶಿಸುವುದು ವಿಶೇಷ. ಕೋಟೆಗಳು ಅಲ್ಲಲ್ಲಿ ಸಿದ್ಧವಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಗಣಿಯಿಂದ ಮಾಡಿದ ಮೂರ್ತಿಗಳನ್ನು ‘ಹಟ್ಟೆವ್ವ’ ಅಥವಾ ‘ಪಾಂಡವರು’ ಎಂದು ಹೆಸರಿಸಿ ಪೂಜಿಸುವ ಸಂಪ್ರದಾಯವಿದೆ. ಮೂಡಲಗಿ ಮೊದಲಾದ ಕಡೆಗಳಲ್ಲಿ ಕುರಿಗಾಹಿಗಳು ಕುರಿಗಳನ್ನು ಬೆದರಿಸುವ ಕಾರ್ಯಕ್ರಮ ನಡೆಸುತ್ತಾರೆ. ಅಲ್ಲದೇ, ರಾತ್ರಿ ವೇಳೆ ಜನರು ಪಗಡೆ ಆಡುವ ಆಚರಣೆಯೂ ಆ ಭಾಗದಲ್ಲಿದೆ. ನಗರದ ಅಲ್ಲಲ್ಲಿ ಗೌಳಿಗರು ಎಮ್ಮೆ ಮತ್ತು ಕೋಣಗಳನ್ನು ಅಲಂಕರಿಸಿ ಮೆರವಣಿಗೆ ನಡೆಸುತ್ತಾರೆ. ತಮ್ಮ ಜೀವನೋಪಾಯಕ್ಕೆ ಸಹಕಾರಿಯಾಗಿರುವ ರಾಸುಗಳಿಗೆ ನಮಿಸುತ್ತಾರೆ.

ಹಿಂದಿನ ಎರಡು ವರ್ಷಗಳಿಗೆ ಹೋಲಿಸಿದರೆ ಕೋವಿಡ್ ಸಾಂಕ್ರಾಮಿಕ ಹರಡುವಿಕೆ ಪ್ರಮಾಣ ಬಹುತೇಕ ಕಡಿಮೆಯಾಗಿದೆ. ಹೀಗಾಗಿ, ಹಬ್ಬಕ್ಕೆ ಕಳೆ ಬಂದಿದೆ. ಜನರು ಮಾರುಕಟ್ಟೆಗಳ ಕಡೆಗೆ ಬರುತ್ತಿರುವುದರಿಂದ ವರ್ತಕರು ಕೂಡ ಖುಷಿಯಾಗಿದ್ದಾರೆ. ಹಬ್ಬದ ಸಂದರ್ಭದಲ್ಲಿ ಒಂದಷ್ಟು ಗಳಿಕೆ ಕಾಣಬಹುದು ಎನ್ನುವ ನಿರೀಕ್ಷೆ ಅವರದಾಗಿದೆ. ಮಾರುಕಟ್ಟೆಗಳಲ್ಲಿ ಕಂಡು ಬಂದ ಜನಸಂದಣಿಯು ಮಾರುಕಟ್ಟೆ ಚೇತರಿಕೆಯ ಆಶಾದಾಯಕ ಸಂದೇಶವನ್ನು ರವಾನಿಸಿತು.

ಬಿಜೆಯಿಂದ ಅಷ್ಟಗಂಧ, ಹಣತೆ ವಿತರಣೆ : ದೀಪಾವಳಿಯ ಹಬ್ಬದ ನಿಮಿತ್ತ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳದವರು 90 ಗ್ರಾಮಗಳ 20ಸಾವಿರ ಮನೆಗಳಿಗೆ ಉಚಿತವಾಗಿ ಅಷ್ಟಗಂಧವನ್ನು ವಿತರಿಸಿದರು. ಗಣೇಶಪುರದ ಜ್ಯೋತಿ ನಗರದ ನಿವಾಸಿಗಳಿಗೆ ಮಂಗಳವಾರ ಸಿಹಿ ಹಾಗೂ ಅಷ್ಟಗಂಧವನ್ನು ವಿತರಿಸಿದರು. ‘ಹಿಂದೂ ಧರ್ಮದ ಪರಂಪರೆ ಹಾಗೂ ದೀಪಾವಳಿಯಲ್ಲಿ ಅಭ್ಯಂಗಸ್ನಾದ ಮಹತ್ವ ತಿಳಿಸುವುದಕ್ಕಾಗಿ ಅಷ್ಟಗಂಧವನ್ನು ಮನೆಮನೆಗೆ ವಿತರಿಸಿದ್ದೇವೆ’ ಎಂದು ಮಂಡಳ ಅಧ್ಯಕ್ಷ ಧನಂಜಯ ಜಾಧವ ತಿಳಿಸಿದರು.

ಪ್ರಧಾನ ಕಾರ್ಯದರ್ಶಿಗಳಾದ ಪಂಕಜ ಘಾಡಿ ಮತ್ತು ಬಸವರಾಜ ಧಮನಗಿ, ಕಾರ್ಯಾಲಯ ಕಾರ್ಯದರ್ಶಿ ನಾರಾಯಣ ಪಾಟೀಲ, ಯತ್ತೇಶ ಹೆಬ್ಬಾಳಕರ, ಅನಿಲ ಪಾಟೀಲ, ಪ್ರದೀಪ ಪಾಟೀಲ, ಭುಜಂಗ ಸಾಲಗುಡೆ, ಲಿಂಗರಾಜ ಹಿರೇಮಠ, ಭಾಗ್ಯಶ್ರೀ ಕೊಕಿತಕರ ಮೊದಲಾದವರು ಪಾಲ್ಗೊಂಡಿದ್ದರು. ಬಿಜೆಪಿ ಮುಖಂಡ ಡಾ.ರವಿ ಬಿ. ಪಾಟೀಲ ಅವರು ಉತ್ತರ ಮತಕ್ಷೇತ್ರದ ಮನೆ ಮನೆಗಳಿಗೆ ಹಣತೆಗಳನ್ನು ವಿತರಿಸಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago