ಬೆಳಗಾವಿ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಆರೋಪದ ಮೇಲೆ ಸಿಬಿಐಯಿಂದ ಬಂಧನಕ್ಕೊಳಗಾಗಿ ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಶನಿವಾರ ಜೈಲಿನಿಂದ ಹೊರಬಂದರು.
ಜೈಲಿಂದ ಹೊರಬರುತ್ತಿದ್ದಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹಣೆಗೆ ತಿಲಕವಿಟ್ಟು ಆರತಿ ಮಾಡಿ ಸ್ವಾಗತಿಸಿ ನಾಳೆ ರಕ್ಷಾ ಬಂಧನ ಹಿನ್ನೆಲೆಯಲ್ಲಿ ರಾಕಿ ಕಟ್ಟಿ ಸ್ವಾಗತಿಸಿದರು.