ಬೆಳಗಾವಿ:ಕೊರೋನಾ ನಂತರ ಬ್ಲ್ಯಾಕ್ ಫಂಗಸ್ ನಿಂದಾಗಿ ಪತ್ರಿ ಸಾವನ್ನಪ್ಪಿದ್ದರಿಂದಾಗಿ, ಮನನೊಂದಂತ ಪತಿ, ತನ್ನ ನಾಲ್ವರು ಮಕ್ಕಳಿಗೆ ವಿಷವಿಕ್ಕಿ ಹತ್ಯೆಗೈದು, ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಧಾರುಣ ಘಟನೆ ಚಿಕ್ಕೋಡಿಯ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿನ ಗೋಪಾಲ್ ಹಾದಿಮನಿ ಪತ್ನಿ ಜಯಾ, ಜುಲೈ 6ರಂದು ಬ್ಲಾಕ್ ಫಂಗಸ್ ನಿಂದಾಗಿ ಸಾವನ್ನಪ್ಪಿದ್ದರು. ಇದರಿಂದ ಮಾನಸಿಕವಾಗಿ ಅವರ ಪತಿ ಗೋಪಾಲ ಹಾದಿಮನಿ ನೊಂದಿದ್ದರು. ಇದೇ ಕೊರಗಿನಲ್ಲಿ ಕಿನ್ನತೆಗೂ ಒಳಗಾಗಿದ್ದರು.
ಹೀಗೆ ಮಾನಸಿಕವಾಗಿ ನೊಂದಿದ್ದಂತ ಗೋಪಾಲ ಹಾದಿಮನಿ, ತನ್ನ ಸೌಮ್ಯ ಹಾದಿಮನಿ(19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ(11) ಹಾಗೂ ಸೃಜನ ಹಾದಿಮನಿ ( 8) ವರ್ಷದ ನಾಲ್ವರು ಮಕ್ಕಳಿಗೆ ವಿಷವಿಕ್ಕಿ ಸಾವಿಸಿ, ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಸಂಕೇಶ್ವರ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…