ಬೆಳಗಾವಿ : ಬೆಳಗಾವಿ- ಬೆಂಗಳೂರು ರೈಲಿಗೆ ಸುರೇಶ್ ಅಂಗಡಿ ಎಕ್ಸ್ಪ್ರೆಸ್ ಎಂದು ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಕನಸನ್ನು ನನಸು ಮಾಡಲು ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗಕ್ಕೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹಣ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.
ಬೆಳಗಾವಿ-ಬೆಂಗಳೂರು ರೈಲಿಗೆ ಸುರೇಶ್ ಅಂಗಡಿ ಎಕ್ಸ್ಪ್ರೆಸ್ ಎಂದು ಹೆಸರಿಡಲು ಈಕೂಡಲೇ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿದ್ದ ಸುರೇಶ್ ಅವರು, ಅಜಾತಶತ್ರುವಾಗಿದ್ದರು. ಸಹನೆಯಿಂದ ಎಲ್ಲರ ಹೃದಯ ಗೆದ್ದಿದ್ದರು. ಸಮರ್ಥ ನಾಯಕನ ಕೈಲಿ ಅಧಿಕಾರ ಸಿಕ್ಕರೆ ಏನೆಲ್ಲಾ ಒಳ್ಳೆ ಬದಲಾವಣೆ ಆಗುತ್ತದೆ ಎನ್ನುವುದಕ್ಕೆ ಇವರೇ ಉದಾಹರಣೆ ಎಂದಿದ್ದಾರೆ.