ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ‌ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ ಚೂನಿಮಟ್ಟಿ ತೋಟದ ನಿವಾಸಿಯಾಗಿರುವ ಶಿವಾನಂದನ ಕಾಚ್ಯಾಗೋಳ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ. ಕೊಲೆ ಆರೋಪದಲ್ಲಿ ಈಗಾಗಲೇ ಬಂಧಿತನಾಗಿರುವ ಭೀಮಪ್ಪ ಬಾನಸಿಯ ತಂಗಿಯನ್ನು ಅತ್ಯಾಚಾರಕ್ಕೆ ಯತ್ನಿಸಿ 2014ರಲ್ಲಿ ಪೋಕ್ಸೊ ಕಾಯ್ದೆಯಡಿ ಶಿವಾನಂದ ಜೈಲು ಸೇರಿದ್ದನು. .ಘಟನೆ ಕುರಿತು ಎಸ್​​​ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿ 1 ವರ್ಷ 9 ತಿಂಗಳು ಜೈಲುವಾಸ ಅನುಭವಿಸಿದ್ದ ಶಿವಾನಂದ ಬಳಿಕ ಆರೋಪಿ ಭೀಮಪ್ಪನನ್ನು ಸಂಪರ್ಕಿಸಿ ನಿನ್ನ ತಂಗಿಯನ್ನು ಮದುವೆಯಾಗುವುದಾಗಿ ಭರವಸೆ ಕೊಡುತ್ತಾನೆ‌. ಆತನ ಮಾತು ನಂಬಿದ ಭೀಮಪ್ಪ ಬಾನಸಿ ಶಿವಾನಂದನಿಗೆ ಜಾಮೀನು ಕೊಡಿಸಿ ಗೆಳೆಯನ ಕೃತ್ಯವನ್ನೆಲ್ಲ ಸಹಿಸಿಕೊಂಡು ಹೊರ ಕರೆದುಕೊಂಡು ಬಂದಿದ್ದ.ಇದಾದ ಎರಡ್ಮೂರು ವರ್ಷಗಳ ಕಾಲ ಸುಮ್ಮನಿದ್ದ ಶಿವಾನಂದ ಕ್ರಮೇಣ ನಿನ್ನ ತಂಗಿಯನ್ನ ಮದುವೆ ಆಗವುದಿಲ್ಲ ಎಂದು ಹೇಳುವ ಮೂಲಕ‌ ಉಲ್ಟಾ ಹೊಡೆಯುತ್ತಾನೆ. ಇದರಿಂದಾಗಿ ಕೊಲೆ ಆರೋಪಿ ಭೀಮಪ್ಪ ರೊಚ್ಚಿಗೆದಿದ್ದಲ್ಲದೇ ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ್ದ.ಇತ್ತ ಇನ್ನೋರ್ವ ಆರೋಪಿಯಾಗಿ ಜೈಲು ಸೇರಿರುವ ಜ್ಯೋತೆಪ್ಪ ಬೇರೊಬ್ಬಳ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ವಿಡಿಯೋಗಳು ಶಿವಾನಂದ ಬಳಿ ಇದ್ದವು. ಹಣ ನೀಡದಿದ್ದರೆ ವಿಡಿಯೋವನ್ನ ಯೂಟ್ಯೂಬ್​ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.ಅಲ್ಲದೆ ಇನ್ನೋರ್ವ ಆರೋಪಿ ವಸಂತನ ಬಳಿ ಕಾರು ಪಡೆದು ವಾಪಸು ಕೊಡಲು ಸತಾಯಿಸುತ್ತಿದ್ದ. ವಾಪಸು ಕೇಳಿದರೆ ಇದಕ್ಕೆ ದಾಖಲೆ ಇಲ್ಲ. ಪೊಲೀಸರಿಗೆ ನಾನೇ ದೂರು ಕೊಡುತ್ತೇನೆ ಎಂದು ಬೆದರಿಸುತ್ತಿದ್ದನಂತೆ. ಹೀಗಾಗಿ, ಮೂವರು ಆರೋಪಿಗಳು ಒಟ್ಟು ಸೇರಿ ಈತನ ಉಸಿರು ನಿಲ್ಲಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಕಳೆದ ಜೂನ್‌ 10ರಂದು ರಾತ್ರಿ‌ ಮನೆಯ ಪಕ್ಕದಲ್ಲೇ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

 

Indresh KC

Recent Posts

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

13 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

31 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

53 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

1 hour ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

1 hour ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

1 hour ago