News Karnataka Kannada
Thursday, May 02 2024
ಬೆಳಗಾವಿ

ರಜೆಯಲ್ಲಿ ಊರಿಗೆ ಬಂದಿದ್ದ ಯೋಧ, ಅಪಘಾತದಲ್ಲಿ ಸಾವು

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit :

ಬೆಳಗಾವಿ: ಅಪರಿಚಿತ ವಾಹನವೊಂದು ಹರಿದು ತನ್ನ ಪತ್ನಿಯ ಸೀಮಂತ ಕಾರ್ಯಕ್ಕೆಂದು ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಎನ್‌.ಎಚ್‌.4 ರಸ್ತೆಯ ಹಿರೇಬಾಗೇವಾಡಿ ಹತ್ತಿರದ ರೈಸ್‌ ಮಿಲ್‌ ಹತ್ತಿರ ಗುರುವಾರ ನಡೆದಿದೆ.

ಮರಾಠಾ ಇನ್‌ಫೆಂಟ್ರಿಯಲ್ಲಿ ಸೈನಿಕರಾಗಿದ್ದ ಸವದತ್ತಿ ತಾಲೂಕಿನ ಹೊಸೂರು ಗ್ರಾಮದ ಪ್ರಕಾಶ ಮಡಿವಾಳಪ್ಪಾ ಸಂಗೊಳ್ಳಿ (28) ಮೃತಪಟ್ಟಿರುವ ಯೋಧ. ಈ ಕುರಿತು ಮೃತ ಯೋಧನ ಸಹೋದರ ಹಿರೇಬಾಗೇವಾಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೃತಪಟ್ಟ ಪ್ರಕಾಶ ಅವರ ಪತ್ನ ಗರ್ಭಿಣಿಯಾಗಿದ್ದರಿಂದ ಅವರ ಸೀಮಂತ ಕಾರ್ಯಕ್ರಮಕ್ಕೆಂದು ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದರು. ಗುರುವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಬರುವುದಾಗಿ ಹೇಳಿ ಹೊಸೂರು ಗ್ರಾಮಕ್ಕೆ ಬೈಕ್‌ನಲ್ಲಿ ವಾಪಸಾಗುತ್ತಿದ್ದ. ಈ ವೇಳೆ ಬೆಳಗಾವಿಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ವಾಹನವೊಂದು ಅವರ ಮೇಲೆ ಹರಿದಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಅಸುನೀಗಿದ್ದಾರೆ. ನಂತರ ವಿಷಯ ತಿಳಿದ ಕುಟುಂಬದ ಸದಸ್ಯರು ಸ್ಥಳಕ್ಕೆ ಬಂದಿದ್ದಾರೆ. ನಂತರ ಮೃತನ ಸಹೋದರ ದೂರು ನೀಡಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು