ಬೆಳಗಾವಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸಿನಿಂದ ಆರೋಪ ಮುಕ್ತಗೊಂಡು ವಿನಯ್ ಕುಲಕರ್ಣಿ 9 ತಿಂಗಳ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಹಿಂಡಲಗಾ ಜೈಲಧಿಕಾರಿಗಳು ಪ್ರಕ್ರಿಯೆ ಮುಗಿಸಿ ಬಿಡುಗಡೆಗೊಳಿಸಿದ್ದಾರೆ.
ಜೈಲಿನ ಹೊರಗೆ ಭಾರೀ ಸಂಖ್ಯೆಯಲ್ಲಿ ಅಪಾರ ಅಭಿಮಾನಿಗಳು, ಕುಟುಂಬಸ್ಥರು ಅವರನ್ನು ಸ್ವಾಗತಿಸಿದರು. ಹೆಣ್ಣುಮಕ್ಕಳು ಸ್ವಾಗತ ಮಾಡಿದರು.
ಈ ವೇಳೆ ನೂಕುನುಗ್ಗಲು ಉಂಟಾಯಿತು, ಜನರು ಕೊರೋನಾ ನಿಯಮ ಮರೆತು ತಳ್ಳಾಡುತ್ತಿರುವುದು ಕಂಡುಬಂತು. ಪೊಲೀಸರು ಗುಂಪನ್ನು ಚದುರಿಸಲು ಹರಸಾಹಸಪಟ್ಟರು.
ಮುಂಬರುವ ದಿನಗಳಲ್ಲಿ ನಾನು ಹೇಗಿರಬೇಕೆಂದು ಎಂದು ಪಾಠ ಕಲಿತಿದ್ದೇನೆ, ಇಂದು ಜಾಮೀನು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ನಿರಪರಾಧಿಯಾಗಿ ಹೊರಬರುತ್ತೇನೆ, ನನಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಹೇಳುತ್ತೇನೆ ಎಂದು ವಿನಯ್ ಕುಲಕರ್ಣಿ ಹೇಳಿದರು.