News Karnataka Kannada
Friday, May 10 2024
ಬೆಳಗಾವಿ

ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ

Siddaramaiah Bang 17 6 21 No 176218 Newsk 3471785224
Photo Credit :

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ರಾಜ್ಯದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ ಪಡೆಯಬೇಕಿತ್ತು. ಪ್ರವಾಹದ ಸಂದರ್ಭದಲ್ಲಿ ಕೊಡಿಸಿದ್ದು ಸರಿಯಲ್ಲ’ ಎಂದು ತಿಳಿಸಿದರು.

‘ನೆರೆ ಬಂದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಪ್ರವಾಹವೇ ಬಂದಿಲ್ಲ ಎನ್ನುವ ಸಚಿವರದು ಬೇಜವಾಬ್ದಾರಿ ಹೇಳಿಕೆ. ಹಾಗಿದ್ದರೆ ಮುಖ್ಯಮಂತ್ರಿ ಇಲ್ಲಿಗೇಕೆ ಬಂದಿದ್ದರು. ಶೋಕಿ ಮಾಡಲು ಬಂದಿದ್ದರಾ? ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದೇನೆ ಎನ್ನುವಾಗ ಕಾಟಾಚಾರಕ್ಕೆಂದು ಇಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು