ಬೆಳಗಾವಿ : ಉತ್ತರಕರ್ನಾಟಕ ರೈತರ ಪರ ಹೋರಾಟ ನಡೆಸಿ ರೈತ ಹೋರಾಟಗಾರ್ತಿ ಎನಿಸಿಕೊಂಡಿದ್ದ ಜಯಶ್ರೀ ಗುರನ್ನವರ ಇಂದು ನಿಧನ ಹೊಂದಿದ್ದಾರೆ.ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಗುರನ್ನವರ ಅವರು ಇಂದು(ಮೇ.22) ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.
ಕುಮಾರಸ್ವಾಮಿ ಸಿಎಂ ಆಗಿದ್ದಾಗ ದೊಡ್ಡ ಮಟ್ಟದ ಹೋರಾಟ
ಇನ್ನು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುನ್ನುಡಿ ಬರೆದಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ, ಸರ್ಕಾರದ ಗಮನ ಸೆಳೆಯಲು ದೊಡ್ಡ ಮಟ್ಟದ ಹೋರಾಟ ಮಾಡಿದ್ದರು.
Ad