ಅಂತರ ಸಚಿವಾಲಯದ ಕೇಂದ್ರ ಅಧ್ಯಯನ ತಂಡ ಜಿಲ್ಲೆಗೆ ಭೇಟಿ

ಬಾಗಲಕೋಟೆ :  ಪ್ರಸಕ್ತ ಸಾಲಿನಲ್ಲಿ  ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಠಿ ಮತ್ತು ಪ್ರವಾಹದಿಂದಾದ ಹಾನಿ ಪರಿಶೀಲನೆಗೆ ಸೆಪ್ಟೆಂಬರ 5 ರಂದು ಅಂತರ ಸಚಿವಾಲಯದ ಕೇಂದ್ರ ಅಧ್ಯಯನ ತಂಡ ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಲಶಕ್ತಿ ಸಚಿವಾಲಯದ ಸೂಪರಿಂಟೆಂಡಿಂಗ್ ಎಂಜಿನೀಯರ್ ಗುರು ಪ್ರಸಾದ ಅವರ ನೇತೃತ್ವದ ತಂಡ ಸೆಪ್ಟೆಂಬರ 5 ರಂದು ರಾತ್ರಿ ಬಾಗಲಕೋಟೆಗೆ ಆಗಮಿಸಲಿದೆ. ನಂತರ ಸೆಪ್ಟೆಂಬರ 6 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಮಖಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳಲ್ಲಿ ಪ್ರವಾಹದಿಂದಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆಂದು ತಿಳಿಸಿದರು.
ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಮನೆ, ಶಾಲೆ ಹಾಗೂ ಅಂಗನವಾಡಿ ಕೇಂದ್ರ, ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ವೀಕ್ಷಿಸಿ ಮಾಹಿತಿ ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ಪ್ರವಾಹದಿಂದ ಉಂಟಾದ ಒಟ್ಟಾರೆ ಹಾನಿಯ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಬೇಕಾಗಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾನಿ ವರದಿಯನ್ನು ಸಿದ್ದಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅಂತರ ಸಚಿವಾಲಯದ ಕೇಂದ್ರ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಮಹೇಶ ಕುಮಾರ ಹಾಗೂ ಸ್ಟೇಟ್ ರೆವಿನ್ಯೂ ಡಿಎಂ ಕನ್ಸ್‍ಲಟಂಟ್ ಶ್ರೀನಿವಾರ ರೆಡ್ಡಿ ಇರಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೋಳ್ಳಿ, ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲಕುಮಾರಿ ಬಾವಿದಡ್ಡಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಶಾಂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಸೇರಿದಂತೆ ತಹಶೀಲ್ದಾರರು ಇತರರು ಉಪಸ್ಥಿತರಿದ್ದರು.
Raksha Deshpande

Recent Posts

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

6 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

31 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

46 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

2 hours ago