ಮಾನಸಿಕ ಅಸ್ವಸ್ಥ ಶಿವಪ್ಪ ಅಮಲೂರು ಎಂಬುವವರು ನದಿಯಲ್ಲಿ ಮುಳುಗಿದ್ದಾರೆ. ಈ ವೇಳೆ ಶಿವಪ್ಪನ ಮೃತದೇಹ ಹುಡುಕಲು ಶಿವಪ್ಪ ಅಮಲೂರು ಪುತ್ರ ಯಮನಪ್ಪ ಅಮಲೂರು ಮತ್ತು ಶಿವಪ್ಪ ಅಮಲೂರು ಅಳಿಯ ಶರಣಗೌಡ ಬಿರಾದರ್ ಸೇರಿ 11 ಜನ ಬೋಟ್ನಲ್ಲಿ ತೆರಳಿದ್ದಾರೆ. ಆಗ ವಿದ್ಯುತ್ ಸ್ಪರ್ಶಿಸಿ ಶಿವಪ್ಪನ ಪುತ್ರ, ಅಳಿಯ ಮತ್ತು ಇವರ ಜೊತೆಗೆ ಇವರನ್ನು ಕರೆದೊಯ್ದಿದ್ದ ಬೋಟ್ ಆಪರೇಟರ್ ಪರಶು ಸೇರಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಷಾತ್ ಬೋಟ್ನಲ್ಲಿದ್ದ ಇತರೆ 8 ಜನರು ಪಾರಾಗಿದ್ದಾರೆ. ಮೃತರು ವಿಜಯಪುರ ಜಿಲ್ಲೆ ತಾಳಿಕೋಟಿ ತಾಲ್ಲೂಕಿನ ಹರನಾಳ ಮೂಲದವರು ಎಂದು ತಿಳಿದು ಬಂದಿದೆ.
ಶಿವಪ್ಪ ಅಮಲೂರರ ಶವ ಹುಡುಕೋದಕ್ಕೆ ಬೋಟ್ ಮೂಲಕ ಹೋದ ಮಗ, ಅಳಿಯ, ಬೋಟ್ ಆಪರೇಟರ್ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಹುನಗುಂದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.