ಬಾಗಲಕೋಟೆ: ಮಹಾರಾಷ್ಟ್ರ ರಾಜ್ಯದ ಕೊಲ್ಲಾಪೂರದಲ್ಲಿ ನಾಡಧ್ವಜವನ್ನು ಸುಟ್ಟಿರುವ ಘಟನೆ ಖಂಡನೀಯ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ನಮ್ಮ ನಾಡು, ನುಡಿ, ಭಾಷೆ ನಮ್ಮ ಉಸಿರಾಟದ ಒಂದು ಭಾಗ. ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ಕರ್ನಾಟಕದಲ್ಲಿ ಮರಾಠಿ – ಕನ್ನಡ ಭಾಷಿಕರಿಬ್ಬರೂ ಒಂದೇ ತಾಯಿಯ ಮಕ್ಕಳಂತೆ ಬದುಕುತ್ತಿದ್ದೇವೆ. ಇದಕ್ಕೆ ಹುಳಿ ಹಿಂಡುವ ಕೆಲಸ ಮಾಡಬಾರದು ಎಂದರು.