News Karnataka Kannada
Friday, May 17 2024
ಬಾಗಲಕೋಟೆ

ಬಾಗಲಕೋಟೆ: ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕೊಲೆ ಮಾಡಿದ ಪತಿ

Photo Credit :

ಬಾಗಲಕೋಟೆ : ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಮದೀನಾ(27) ಕೊಲೆಯಾದ ಮಹಿಳೆ. ಮೆಹಬೂಬ್ ಬಂಡಿ ಎಂಬುವವನೇ ಕೊಲೆ ಮಾಡಿದ ಆರೋಪಿ.

ಆರೋಪಿಯು ನಗರದಲ್ಲಿ ಪಾನಿಪೂರಿ ಮಾರಿ ಜೀವನ ಸಾಗಿಸುತ್ತಿದ್ದ. ಅಲ್ಲದೇ, ಪತಿ ಕುಡಿತದ ದಾಸನಾಗಿದ್ದರಿಂದಾಗಿ ಕುಟುಂಬ ನಿರ್ವಹಣೆಗಾಗಿ ಹಾಗೂ ಮಕ್ಕಳ ಶಾಲಾ ಖರ್ಚಿಗಾಗಿ ಪತ್ನಿ ಮದೀನಾ ಹೊಲಿಗೆ ಕೆಲಸ ಮಾಡಿಕೊಂಡಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.

ಆದರೆ, ತಡರಾತ್ರಿ ಕುಡಿದ ಅಮಲಿನಲ್ಲಿ ಬಂದ ಮೆಹಬೂಬ್ ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ರಾಡ್ ನಿಂದ ತಲೆಗೆ ಹೊಡೆದಿದ್ದಾನೆ. ಹೊಡೆತದ ತೀವ್ರತೆಗೆ ಕುಸಿದು ಬಿದ್ದ ಮದೀನಾ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮಕ್ಕಳ ಎದುರೇ ಪತ್ನಿಯನ್ನು ಕೊಲೆ ಮಾಡಿದ್ದು, ಮಕ್ಕಳು ತಾಯಿಯ ಶವ ಕಂಡು ದಿಗ್ಬ್ರಾಂತರಾಗಿದ್ದಾರೆ. ಬಳಿಕ ಮಕ್ಕಳನ್ನು ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಆ ನಂತರ ನಿದ್ರೆಗೆ ಜಾರಿದ್ದಾನೆ. ಮೆಹೆಬೂಬ್ ನಿದ್ರೆಗೆ ಜಾರುತ್ತಿದ್ದಂತೆ ಮಕ್ಕಳು ಮನೆಯಿಂದ ಹೊರಗೆ ಬಂದು, ಅಕ್ಕ-ಪಕ್ಕದ ಮನೆಯವರಿಗೆ ನಡೆದ ವಿಷಯ ಹೇಳಿದ್ದಾರೆ. ಸದ್ಯ ಸ್ಥಳಕ್ಕೆ ಇಳಕಲ್ ನಗರ ಪೊಲೀಸರು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ. ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು