ಬಾಗಲಕೋಟೆ: ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ ಭವನದ ಮುಂದೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠಗಳ ಗೀತ ಗಾಯನ ಸಂಭ್ರಮದಿಂದ ನಡೆಯಿತು.
ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ, ಸಿಇಓ ಟಿ.ಭೂಬಾಲನ್, ಎಸಿ ಗಂಗಪ್ಪ, ಅಧಿಕಾರಿಗಳಾದ ಶ್ರೀಶೈಲ ಕಂಕಣವಾಡಿ,ಮಹೇಶ ಪೋತದಾರ, ಶಂಕರಗೂಗಿ, ಹೇಮಾವತಿ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ನಾಡಗೀತೆಯ ಸಾಮೂಹಿಕ ಗೀತ ಗಾಯನ ನಡೆಯಿತು.