ಬಾಗಲಕೋಟೆ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದಲ್ಲಿ ನಡೆದಿದೆ.
ಸೂಳಿಕೇರಿ ಗ್ರಾಮದ ಯೋಧ ಹನುಮಂತ ಎಸ್ ಹಡಪಡ (32) ಮೃತ ಯೋದ ಎಂದು ಗುರುತಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದ ಯೋಧ ಎಂಟು ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಇಂದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರುಳೆದರು.
ಸುಮಾರು 12 ವರ್ಷಗಳಿಂದ ಇಂಡಿಯನ್ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಹನುಮಂತ ಇತ್ತೀಚೆಗೆ ಪಂಜಾಬ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯೋಧ ರಜೆಗಾಗಿ ಊರಿಗೆ ಬಂದಿದ್ದ ಯೋಧ ಬೈಕ್ ಅಪಘಾತದಿಂದ ಮೃತರಾದರು.