ಬಾಗಲಕೋಟೆ : ತಾಲೂಕಿನ ಮಂಕಣಿ ಗ್ರಾಮದಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಸಹಕಾರಿ ಸಂಘವು ಕನಿಷ್ಠ 3 ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದ ಎರಡು ವರ್ಷಗಳಲ್ಲಿ ಕನಿಷ್ಠ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು.
ಅರ್ಜಿ ನಮೂನೆಯನ್ನು ಬಾಗಲಕೋಟೆ ತಹಶೀಲ್ದಾರ ಕಚೇರಿಯಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ 28 ರಂದು ಸಂಜೆ 5.30 ರೊಳಗಾಗಿ ಸಲ್ಲಿಸುವಂತೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ತಿಳಿಸಿದ್ದಾರೆ.