News Karnataka Kannada
Sunday, April 28 2024
ಬಾಗಲಕೋಟೆ

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಗೆ ಪಾಟೀಲ ಚಾಲನೆ

New Project 2021 09 21t225158.333
Photo Credit :

ಬಾಗಲಕೋಟೆ :  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ನವನಗರದ ಟಿ.ಎ.ಪಿ.ಸಿ.ಎಂ.ಎಸ್ ಸಂಘದಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಚಾಲನೆ ನೀಡಿದರು.

ನವನಗರದ ಎಪಿಎಂಸಿ ಯಾರ್ಡನಲ್ಲಿಂದು ಹೆಸರುಕಾಳು ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿ ಕ್ವಿಂಟಲ್‍ಗೆ 7275 ರೂ.ಗಳಂತೆ ರೈತರಿಂದ ಪ್ರತಿ ಎಕರೆಗೆ ಗರಿಷ್ಟ 4 ಕ್ವಿಂಟಲ್ ಹಾಗೂ ಗರಿಷ್ಟ 6 ಕ್ವಿಂಟಲ್ ಹೆಸರುಕಾಳನ್ನು ಖರೀದಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಲು ತಿಳಿಸಿದರು.

ಬಾಗಲಕೋಟೆ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಎಸ್.ಬಿ.ಮಾಚಾ ಮಾತನಾಡಿ ಸರಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಬರುವ ಎಲ್ಲ ಯೋಜನೆಗಳ ಲಾಭ ರೈತರು ಪಡೆದುಕೊಳ್ಳಬೇಕು. ಸಂಸ್ಥೆಯವರು ಖರೀದಿಸಿದ ಹೆಸರುಕಾಳಿನ ಹಣವನ್ನು ಕೂಡಲೇ ರೈತರಿಗೆ ಪಾವತಿಸಲು ಮತ್ತು ರೈತರಿಗೆ ಖರೀದಿ ಕೇಂದ್ರದ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಕೆ.ಎಸ್.ಸಿ.ಎಂ.ಎಫ್ ಶಾಖಾಧಿಕಾರಿ ಶ್ರೀಧರ ಕುಲಕರ್ಣಿಯವರಿಗೆ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಪ್ರಭುಸ್ವಾಮೀಜಿ ಸರಗಣಾಚಾರಿ, ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಎನ್.ಪತ್ತಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ಕೃಷಿ ಅಧಿಕಾರಿ ಗಯಾಲಿ, ಮತ್ತು ಎ.ಪಿ.ಎಮ್.ಸಿ ಸಹಾಯಕ ನಿರ್ದೇಶಕ ಲಕ್ಕುಂಡಿ, ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾದ ವೆಂಕಣ್ಣ ಹಲಗಲಿ, ಶಿದ್ದಪ್ಪ ಹೂಗಾರ, ವೆಂಕಟೇಶ ರಂಗನ್ನವರ, ನೀಲಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಬಸವರಾಜ ಮಸಬಿನಾಳ ನಿರೂಪಿಸಿದರು. ಆಡಳಿತ ಮಂಡಳಿಯ ನಿರ್ದೇಶಕರಾದ ರಂಗನ್ನವರ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು