ಬಾಗಲಕೋಟೆ : ಮುಖ್ಯಮಂತ್ರಿ ಚಂದ್ರು ಮೀಸಲಾತಿಗೆ ಅಪಸ್ವರ ಎತ್ತಿರುವ ವಿಚಾರಕ್ಕೆ ಪಂಚಮಸಾಲಿ ಸಮಾಜದ ರಾಷ್ಟಿçಯ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ. ಪಂಚಮಸಾಲಿ ಸಮುದಾಯ ಮೀಸಲಾತಿ ಬೇಡ ಅನ್ನೋದಕ್ಕೆ ಇವರು ಯಾರು? ಎಂದು ಪ್ರಶ್ನಿಸಿದರು.
ಮೀಸಲಾತಿಗಾಗಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದೇವೆ. 10 ಲಕ್ಷ ಜನ ಸೇರಿಸಿ ಸಮಾವೇಶ ಮಾಡಿ ನ್ಯಾಯ ಕೇಳಿದ್ದೇವೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಬೇಡ ಎಂದು ಹೇಳುವುದಕ್ಕೆ ಇವರು ಯಾರು? ನೀವು ನಿಮ್ಮಷ್ಟಕ್ಕೆ ಹೋರಾಟ ಮಾಡಿ. ಆದರೇ ನಮ್ಮ ತಂಟೆಗೆ ಬಂದರೇ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಸಂವಿಧಾನಾತ್ಮಕವಾಗಿ ಮೀಸಲಾತಿ ಕೇಳುತ್ತಿದ್ದೇವೆ. ಆ.26 ರಿಂದ ಮಲೆ ಮಹದೇಶ್ವರ ಬೆಟ್ಟದಿಂದ ಮತ್ತೇ ಜಾಗೃತಿ ಸಭೆ ಆರಂಭಿಸುತ್ತೇವೆ ಎಂದರು.