News Karnataka Kannada
Saturday, April 27 2024
ಬಾಗಲಕೋಟೆ

ಸರಕಾರಿ ಗೋಶಾಲೆ ಸ್ಥಾಪನೆಗೆ ಕ್ರಮ : ಡಿಸಿ ರಾಜೇಂದ್ರ

New Project 2021 09 14t200157.486
Photo Credit :

ಬಾಗಲಕೋಟೆ : ಗೋಹತ್ಯೆ ತಡೆಯಲು ಹಾಗೂ ಜಾನುವಾರುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸರಕಾರಿ ಗೋಶಾಲೆ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು ರಾಜ್ಯದಲ್ಲಿ ಗೋಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದೆ. ಇದಕ್ಕೆ ಪೂರಕವಾಗಿ ಗೋಹತ್ಯೆ ತಡೆಯಲು ಹಾಗೂ ಜಾನುವಾರುಗಳನ್ನು ಸಂರಕ್ಷಿಸಲು ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆಗೆ ಸರಕಾರ ಘೋಷಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಗೋಶಾಲೆ ಸ್ಥಾಪನೆಗೆ ಮೊದಲ ಆದ್ಯತೆ ನೀಡಬೇಕು. ಅದಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯವನ್ನು ವಿವಿಧ ಇಲಾಖೆಯ ಕಾರ್ಯಕ್ರಮಗಳೊಂದಿಗೆ ಒಗ್ಗೂಡಿಸಬೇಕು. ಹೊಸದಾಗಿ ಗೋಶಾಲೆ ಪ್ರಾರಂಭಕ್ಕೆ ಸಮಯಾವಕಾಶ ಬೇಕಾಗಿರುವದರಿಂದ ಸುತ್ತೋಲೆಯಲ್ಲಿ ಸೂಚಿಸಿದಂತೆ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಗೋಶಾಲೆ ಪ್ರಾರಂಭಿಸಲು ಆಸಕ್ತಿ ತೋರಿಸಿದಲ್ಲಿ ಅಂತವುಗಳನ್ನು ಗುರುತಿಸಿ ಖಾಸಗಿ ಸಹಭಾಗಿತ್ವದ ಸರ್ಕಾರಿ ಗೋಶಾಲೆಗಳಿಗೆ ಸರ್ಕಾರದಿಂದ ಕಳುಹಿಸುತ್ತಿರುವ ಜಾನುವಾರುಗಳನ್ನು ಸೇರ್ಪಡೆ ಮಾಡಲು ಮತ್ತು ಅವುಗಳಿಗೆ ಅವಶ್ಯವಿರುವ ಪ್ರತಿದಿನದ ನಿರ್ವಹಣೆ ವೆಚ್ಚವನ್ನು ಎನ್‍ಡಿಆರ್‍ಐ ಮಾರ್ಗಸೂಚಿಗಳನ್ವಯ ಗೋಶಾಲೆ ಪ್ರಾರಂಭಿಸಲು ತಿಳಿಸಿದರು. ಅದಕ್ಕೆ ಸಂಬಂಧಿಸಿದಂತೆ ಖಾಸಗಿ ಗೋಶಾಲೆಯೊಂದಿಗೆ ಸರ್ಕಾರದಿಂದ ಒಡಂಬಡಿಕೆ ಮಾಡಿಕೊಳ್ಳಲು ಸಭಾಧ್ಯಕ್ಷರು ಸೂಚಿಸಿದರು. ಸೇರ್ಪಡೆಯಾಗುವ ಜಾನುವಾರುಗಳ ದಾಖಲಾತಿ ನಿರ್ವಹಿಸಲು ಹಾಗೂ ಅವುಗಳ ಆರೋಗ್ಯ ಅಥವಾ ಅವಶ್ಯವಿರುವ ಚಿಕಿತ್ಸೆ ನೀಡಲು ಸ್ಥಳೀಯ ಪಶುವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ನೀಡಲು ಸಭೆ ತೀರ್ಮಾನಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು