ಸರಕಾರಿ ಗೋಶಾಲೆ ಸ್ಥಾಪನೆಗೆ ಕ್ರಮ : ಡಿಸಿ ರಾಜೇಂದ್ರ

ಬಾಗಲಕೋಟೆ : ಗೋಹತ್ಯೆ ತಡೆಯಲು ಹಾಗೂ ಜಾನುವಾರುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸರಕಾರಿ ಗೋಶಾಲೆ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು ರಾಜ್ಯದಲ್ಲಿ ಗೋಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದೆ. ಇದಕ್ಕೆ ಪೂರಕವಾಗಿ ಗೋಹತ್ಯೆ ತಡೆಯಲು ಹಾಗೂ ಜಾನುವಾರುಗಳನ್ನು ಸಂರಕ್ಷಿಸಲು ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆಗೆ ಸರಕಾರ ಘೋಷಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಗೋಶಾಲೆ ಸ್ಥಾಪನೆಗೆ ಮೊದಲ ಆದ್ಯತೆ ನೀಡಬೇಕು. ಅದಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯವನ್ನು ವಿವಿಧ ಇಲಾಖೆಯ ಕಾರ್ಯಕ್ರಮಗಳೊಂದಿಗೆ ಒಗ್ಗೂಡಿಸಬೇಕು. ಹೊಸದಾಗಿ ಗೋಶಾಲೆ ಪ್ರಾರಂಭಕ್ಕೆ ಸಮಯಾವಕಾಶ ಬೇಕಾಗಿರುವದರಿಂದ ಸುತ್ತೋಲೆಯಲ್ಲಿ ಸೂಚಿಸಿದಂತೆ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಗೋಶಾಲೆ ಪ್ರಾರಂಭಿಸಲು ಆಸಕ್ತಿ ತೋರಿಸಿದಲ್ಲಿ ಅಂತವುಗಳನ್ನು ಗುರುತಿಸಿ ಖಾಸಗಿ ಸಹಭಾಗಿತ್ವದ ಸರ್ಕಾರಿ ಗೋಶಾಲೆಗಳಿಗೆ ಸರ್ಕಾರದಿಂದ ಕಳುಹಿಸುತ್ತಿರುವ ಜಾನುವಾರುಗಳನ್ನು ಸೇರ್ಪಡೆ ಮಾಡಲು ಮತ್ತು ಅವುಗಳಿಗೆ ಅವಶ್ಯವಿರುವ ಪ್ರತಿದಿನದ ನಿರ್ವಹಣೆ ವೆಚ್ಚವನ್ನು ಎನ್‍ಡಿಆರ್‍ಐ ಮಾರ್ಗಸೂಚಿಗಳನ್ವಯ ಗೋಶಾಲೆ ಪ್ರಾರಂಭಿಸಲು ತಿಳಿಸಿದರು. ಅದಕ್ಕೆ ಸಂಬಂಧಿಸಿದಂತೆ ಖಾಸಗಿ ಗೋಶಾಲೆಯೊಂದಿಗೆ ಸರ್ಕಾರದಿಂದ ಒಡಂಬಡಿಕೆ ಮಾಡಿಕೊಳ್ಳಲು ಸಭಾಧ್ಯಕ್ಷರು ಸೂಚಿಸಿದರು. ಸೇರ್ಪಡೆಯಾಗುವ ಜಾನುವಾರುಗಳ ದಾಖಲಾತಿ ನಿರ್ವಹಿಸಲು ಹಾಗೂ ಅವುಗಳ ಆರೋಗ್ಯ ಅಥವಾ ಅವಶ್ಯವಿರುವ ಚಿಕಿತ್ಸೆ ನೀಡಲು ಸ್ಥಳೀಯ ಪಶುವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ನೀಡಲು ಸಭೆ ತೀರ್ಮಾನಿಸಿತು.

Raksha Deshpande

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

16 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

31 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

46 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

50 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

2 hours ago