ಬಾಗಲಕೋಟೆ : ರಾಷ್ಟ್ರವಾದಿ ಮುಸಲ್ಮಾನರು ಬಿಜೆಪಿಗೆ ಬರುವುದಾದರೆ ಸ್ವಾಗತ. ಆದರೆ ಯಾವ ಕಾರಣಕ್ಕೂ ಸಿ.ಎಂ.ಇಬ್ರಾಹಿಂರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ.ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರವಾದಿ ಮುಸಲ್ಮಾನರು ಬಿಜೆಪಿಗೆ ಬರುವುದಾದರೆ ಸ್ವಾಗತ. ಆದರೆ ಯಾವ ಕಾರಣಕ್ಕೂ ಸಿ.ಎಂ.ಇಬ್ರಾಹಿಂರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಕಾಂಗ್ರೆಸ್ ಕೇವಲ ವೋಟಿಗಾಗಿ ಮುಸ್ಲಿಮರನ್ನು ಬಳಸಿಕೊಂಡಿದೆ. ಮುಸ್ಲಿಮರು ಕೈಬಿಟ್ಟರೆ ಕಾಂಗ್ರೆಸ್ ಉಸಿರುಗಟ್ಟಿ ಸಾಯುತ್ತದೆ. ಬಿಜೆಪಿ ಜೊತೆಗೆ ಹಿಂದುಳಿದವರು,ದಲಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈಗ ಮುಸಲ್ಮಾನರು ಕೂಡ ಬಿಜೆಪಿಗೆ ಬರುವುದಕ್ಕೆ ಸ್ವಲ್ಪ ಹಿಂದೆ ಮುಂದೆ ನೋಡುತ್ತಾ ಇದ್ದಾರೆ ಎಂದರು.