ಬಾಗಲಕೋಟೆ: ಹಿಂದಿ ದಿವಸ ವಿರೋಧ ಹಾಗೂ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ ಮಾತನಾಡಿ, ದೇಶದಲ್ಲಿ ಆಯಾ ರಾಜ್ಯದಲ್ಲಿ ಪ್ರಾದೇಶಿಕ ಭಾಷೆಗಳ ತನ್ನ ಸಾರ್ವಭೌಮತ್ವ ಹೊಂದಿವೆ. ಸ್ಥಳೀಯ ಭಾಷೆಗಳಿಗೆ ಸಾವಿರಾರು ವರ್ಷಗಳ ಇತಿಹಾಸಿವಿದೆ. ಅವುಗಳಿಗೆ ಗೌರವ ನೀಡುವ ಬದಲು ರಾಷ್ಟೀಯ ಭಾಷೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಒತ್ತಾಯ ಪೂರ್ವಕವಾಗಿ ಹೇರಲು ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.