News Karnataka Kannada
Monday, April 29 2024
ಬಾಗಲಕೋಟೆ

ಹಿಂದಿ ದಿವಸ ವಿರೋಧಿಸಿ ಕರವೇ ಪ್ರತಿಭಟನೆ

New Project 2021 09 15t140354.981
Photo Credit :

ಬಾಗಲಕೋಟೆ: ಹಿಂದಿ ದಿವಸ ವಿರೋಧ ಹಾಗೂ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ ಮಾತನಾಡಿ, ದೇಶದಲ್ಲಿ ಆಯಾ ರಾಜ್ಯದಲ್ಲಿ ಪ್ರಾದೇಶಿಕ ಭಾಷೆಗಳ ತನ್ನ ಸಾರ್ವಭೌಮತ್ವ ಹೊಂದಿವೆ. ಸ್ಥಳೀಯ ಭಾಷೆಗಳಿಗೆ ಸಾವಿರಾರು ವರ್ಷಗಳ ಇತಿಹಾಸಿವಿದೆ. ಅವುಗಳಿಗೆ ಗೌರವ ನೀಡುವ ಬದಲು ರಾಷ್ಟೀಯ ಭಾಷೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಒತ್ತಾಯ ಪೂರ್ವಕವಾಗಿ ಹೇರಲು ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1949 ಸೆ.14 ರಂದು ರಾಷ್ಟ್ರದ ಆಡಳಿತ ಭಾಷೆಯಾಗಿ ಹಿಂದಿಯನ್ನು ಪರಿಗಣಿಸಿ ಸಂವಿಧಾನದಲ್ಲಿ ತಿದ್ದುಪಡಿ ತರಲಾಗಿದೆ. ಆಡಳಿತ ಭಾಷೆಯಾಗಿ ಬಳಸಲು ನಿರ್ಧರಿಸಲಾಗಿದೆ. ಯಾವುದೇ ಕಾರಣಕ್ಕೂ ರಾಷ್ಟ್ರ ಭಾಷೆಯಾಗಿ ಘೋಷಣೆ ಮಾಡಿಲ್ಲ. ಇದೀಗ ಕೇಂದ್ರ ಸರ್ಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷೆ ಹೇರಿಕೆ ಮಾಡಲು ನಿರ್ಧಾರ ಮಾಡಿದೆ. ಪ್ರಾದೇಶಿಕ ಭಾಷೆಗಳ ಕಡೆಗಣನೆ ಸರಿಯಾದ ನೀತಿಯಲ್ಲ. ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ಹಿಂದಿ ಮಾತೃಭಾಷೆಯಾಗಿದೆ. ಹಿಂದಿಯೇತರ ರಾಜ್ಯಗಳ ಮೇಲೆ ಭಾಷಾ ಗದಾಪ್ರಹಾರ ನಡೆಸುವುದು ತರವಲ್ಲ ಎಂದರು.

ಮುಖ0ಡರಾದ ಚೇತನ ದೊಡ್ಡಮನಿ, ಪವನ ಕಾಂಬಳೆ, ಶಂಕರ ಮುತ್ತಲಗೇರಿ,  ಸಂತೋಷ ಚಿನಿವಾಲರ, ನವೀನ ಕಪಾಲಿ, ವಿಷ್ಣು ಬಾರಕೇರ, ಮಂಜುನಾಥ ಸವದಿ, ಸಿದ್ದರಾಮೇಶ್ವರ ಹಾಸನ ಇತರರು ಇದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು