News Karnataka Kannada
Saturday, May 04 2024
ಬಾಗಲಕೋಟೆ

ಬಾದಾಮಿ: ಸಿದ್ದರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ಅಪಘಾತ

Car catches fire during match promotional event
Photo Credit : Wikimedia

ಬಾದಾಮಿ: ಬಾಗಲಕೋಟೆ ಜಿಲ್ಲೆಯಿಂದ ಸಿದ್ದರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ಅಪಘಾತಕ್ಕೀಡಾಗಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಬಾದಾಮಿ ತಾಲೂಕಿನ ಹೂಲಗೇರಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಮುಧೋಳ ತಾಲೂಕಿನ ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ (34) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವೇಗವಾಗಿ ಹೊರಟಿದ್ದ ಕ್ರೂಸರ್ ಎದುರಿಗೆ ಬಂದ ಗೂಡ್ಸ್ ವಾಹನಕ್ಕೆ ಮುಖಾಮುಖಿಯಾಗಿದೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕ್ರೂಸರ್‌ನಲ್ಲಿ ಒಟ್ಟು 12 ಜನ ಪ್ರಯಾಣಿಸುತ್ತಿದ್ದರು‌ ಎಂದು ತಿಳಿದುಬಂದಿದೆ. ಇವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು