ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮಾರ್ಗದ ಲೋಕಾಪುರ-ಖಜ್ಜಿಡೋಣಿ ಮಾರ್ಗ ಮಧ್ಯೆ ಟಿಪ್ಪರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಶಾರದಾಳ ಗ್ರಾಮದ ಯಂಕಣ್ಣ ತಳವಾರ (29), ಉದಗಟ್ಟಿ ಗ್ರಾಮದ ಹನುಮಂತ ಪೂಜಾರ (28) ಸಾವಿಗೀಡಾದ ಬೈಕ್ ಸವಾರರು.
ಲೋಕಾಪುರ ಪಟ್ಟಣದಿಂದ ಊರ ಕಡೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ಗೂ ಇವರ ಬೈಕ್ಗೂ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.