News Karnataka Kannada
Wednesday, May 01 2024
ಬಾಗಲಕೋಟೆ

ಹಿಂದೂ ಆಗಿ ಹಿಂದೂಗಳ ವಿರುದ್ಧ ನಿಲ್ಲುವವರೇ ಹಿಜಡಾಗಳು: ಯತ್ನಾಳ್ ಸ್ಟೋಟಕ ಹೇಳಿಕೆ

Actor Prakash Raj is a pig, says Yatnal
Photo Credit : Twitter

ಬಾಗಲಕೋಟೆ: ಬಿಜೆಪಿ ನಾಯಕರ ಒಳಜಗಳ ಕಳೆದ ಕೆಲ ದಿನಗಳಿಂದು ಹೆಚ್ಚುತ್ತಿದೆ. ಹೇಳಿಕೆ ಪ್ರತಿಹೇಳಿಕೆ ತಾರಕಕ್ಕೇರಿದ್ದು, ಮಾತಿನ ಯುದ್ಧ ನಡೆಯುತ್ತಿದೆ. ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿನ ದೇವರಂತಹ ಕಾರ್ಯಕರ್ತರು ಎಲ್ಲಿಯೂ ಸಿಗೋದಿಲ್ಲ, ನಾನು ಯಡಿಯೂರಪ್ಪ, ಅನಂತ ಕುಮಾರ್ ಜೊತೆ ಬೆಳೆದವನು, ನಾನು ನಾಲ್ಕನೇ ಲೀಡರ್. ಯಡಿಯೂರಪ್ಪ ನಮ್ಮನ್ನು ಮಂತ್ರಿ ಮಾಡಲಿಲ್ಲ. ಬೊಮ್ಮಾಯಿ ಮಾಡ್ತಿದ್ರು ಆದರೆ, ಅನುಮತಿ ಸಿಗಲಿಲ್ಲ.

ನಾವೇನು ಇಲ್ಲಿ ಗುಂಡಾಗಿರಿ ಮಾಡೋಕೆ ಬಂದಿಲ್ಲ, ಹಿಂದೂ ಆಗಿ ಹಿಂದೂಗಳ ವಿರುದ್ಧ ನಿಲ್ಲುವವರೇ ಹಿಜಡಾಗಳು, ನಮ್ಮ ಪಾರ್ಟಿಯಲ್ಲಿದ್ದು ನಮ್ಮವರನ್ನು ಸೋಲಿಸೋದು ಆಗಬಾರದು. ರಾಜ್ಯದಲ್ಲಿ ನಮ್ಮ ಕೆಲವು ನಾಯಕರು ಮಾಡಿದ್ದು ರಾಷ್ಟ್ರೀಯ ನಾಯಕರಿಗೆ ಗೊತ್ತಿದೆ. ಬಾಗಲಕೋಟೆ ರಾಜಕಾರಣ ಹದಗೆಟ್ಟ ಹೈದರಾಬಾದ್‌ ಆಗಿದೆ ಎಂದರು. ಗೌಡ್ರನ್ನ ಕೆಡವೇ ಕೆಡತಿವಿ. ಮುಗಿಸೇ ಬಿಡ್ತೀವಿ ಅಂದ್ರು. ಅವರು ಏನಾದ್ರೂ ನಿಮಗೆ ಗೊತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ಬಸನಗೌಡ ಪಾಟೀಲ್‌ ಯತ್ನಾಳ್‌ ಭಾಷಣಕ್ಕೆ ವೇದಿಕೆಯಲ್ಲಿಯೇ ಯತ್ನಾಳ್‌ ಹೆಸರು ಹೇಳದೇ ತಿರುಗೇಟು ನೀಡಿದ ಮುರುಗೇಶ್‌ ನಿರಾಣಿ, ನಾವು ಸಹ ಕೃಷ್ಣಾ ನದಿ ನೀರು ಕುಡಿದೀವಿ. ಬಾಗಲಕೋಟೆ, ವಿಜಯಪುರ ಗಾಳಿ ಸೇವಿಸಿದ್ದೇವೆ. ಯಾರು ಏನು ಮಾತಾಡ್ತಾರಾ ಅದರ ಹತ್ತರಷ್ಟು ಶಬ್ದ ನಮ್ಮ ಬಾಯಲ್ಲಿ ಇವೆ ಎಂದರು.

ಚುನಾವಣೆಯಲ್ಲಿ ಜಿಲ್ಲೆಯಲ್ಲಿ ತಾವೊಬ್ಬರೇ ಗೆದ್ದಿರುವುದಾಗಿ ಯತ್ನಾಳಗೆ ಕೋಡು, ಸೊಕ್ಕು, ದಿಮಾಕು ಬಂದಿದೆ. 2018ರಲ್ಲಿ ನಾಗಠಾಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೋವಿಂದ ಕಾರಜೋಳ ಮಗನನ್ನು ಸೋಲಿಸಿದವರು ಯಾರು? ಬಬಲೇಶ್ವರದಲ್ಲಿ ಮೂರು ಚುನಾವಣೆಯಲ್ಲಿ ವಿಜುಗೌಡರನ್ನು ಸೋಲಿಸಿದ್ದು ಯಾರು? ಎಂದು ಮುರುಗೇಶ್ ನಿರಾಣಿ ಯತ್ನಾಳ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

35 ವರ್ಷಗಳಿಂದ ಬಿಜೆಪಿಯಲ್ಲೇ ಇದ್ದೇನೆ. ಪಕ್ಷ ನನ್ನ ತಾಯಿ ಇಲ್ಲಿಯೇ ಇದ್ದೇನೆ. ಮುಂದೆಯೂ ಇರುತ್ತೇನೆ. ಮತ್ತೊಬ್ಬರ ತರಹ ನಾಟಕ ಆಡಿ ಈ ಕಡೆ ಆ ಕಡೆ ಹೋಗುವುದಿಲ್ಲ. ತಲೆ ಮೇಲೆ ಟೋಪಿಗೆ ಹಾಕಿಕೊಂಡು ನಮಾಜ್‌ ಮಾಡಿಲ್ಲ. ಬಾಳ ಕೆದಕಲಿಕ್ಕೆ ಹೋದರೆ ಎಲ್ಲರೂ ಸೆಗಣಿ ತಿನ್ನೋರ ಅದಾರ’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು