News Karnataka Kannada
Saturday, April 27 2024
ಬಾಗಲಕೋಟೆ

ವಿದ್ಯಾರ್ಥಿನಿ ಮೇಲೆ ಸಂಶಯ ಪಟ್ಟ ಶಿಕ್ಷಕಿಯರು : ನೊಂದ ಬಾಲಕಿ ಆತ್ಮಹತ್ಯೆ

ಹಣ ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಬಟ್ಟೆ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ ಇದರಿಂದ ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
Photo Credit : News Kannada

ಬಾಗಲಕೋಟೆ: ಹಣ ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಬಟ್ಟೆ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ ಇದರಿಂದ ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಗ್ರಾಮದ ಕದಂಪುರ ಪ್ರೌಢಶಾಲೆಯ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಇವರ 2 ಸಾವಿರ ಹಣ ಕಳೆದು ಹೋಗಿದೆ ಎಂದು ಕೆಲವು ವಿದ್ಯಾರ್ಥಿನಿಯರ ಮೇಲೆ ಸಂಶಯ ಪಟ್ಟು ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ. ದೇವರ ಮೇಲೆ ಆಣೆ ಕೂಡ ಮಾಡಿಸಿದ್ದಾರೆ.ಈ ವೇಳೆ ಮನನೊಂದ ವಿದ್ಯಾರ್ಥಿನಿ ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆದರೆ ಹಣ ಮಾರನೇ ದಿನ ಶಾಲೆಯ ಲ್ಯಾಬ್ ನಲ್ಲಿತ್ತು ಎಂದು ತಿಳಿದು ಬಂದಿದೆ. ವಿನಾಕಾರಣ ಸಂಶಯಪಟ್ಟು ಒಂದು ಜೀವ ಹೋಗಲು ಶಿಕ್ಷಕಿ ಕಾರಣರಾಗಿದ್ದಾರೆ.

ಇತ್ತ ಪೋಷಕರು ಶಿಕ್ಷಕಿ ವಿರುದ್ಧ ಬಾಗಲಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯ ಚಿಕ್ಕಪ್ಪ ಶಿಕ್ಷಕಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೋಷಕರು ಘಟನೆ ತಕ್ಷಣ ತಿಳಿಸದಕ್ಕೆ ಪೋಷಕರ ವಿರುದ್ದ ದೂರು ದಾಖಲಿಸಲು ಮುಂದಾಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು