ಬಾಗಲಕೋಟೆ: ಸಾಲ ವಸೂಲಿಗೆ ಬಂದ ಖಾಸಗಿ ಬ್ಯಾಂಕ್ನ ರಿಕವರಿ ಸಿಬ್ಬಂದಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಜೋಗಿಮಡ್ಡಿ ಕಾಲೋನಿಯಲ್ಲಿ ನಡೆದಿದೆ.
ಸಾಲ ಕಟ್ಟದ ಕಾರಣ ಮಹಿಳೆಯ ಕಪಾಳಕ್ಕೆ ಹೊಡೆದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ರುಕ್ಸಾನಾ ಎಂಬ ಮಹಿಳೆಗೆ ಕಪಾಳಕ್ಕೆ ಹೊಡೆದು ದುರ್ವರ್ತನೆ ಮೆರೆದಿದ್ದಾನೆ. ರಾಜೇಸಾಬ್ ಎಂಬ ಬ್ಯಾಂಕ್ ರಿಕವರಿ ನೌಕರ ಹಲ್ಲೆ ಮಾಡಿದ್ದಾನೆ.
ಹಲ್ಲೆ ಮಾಡಿದ್ದೂ ಮಾತ್ರವಲ್ಲದೇ ಮಹಿಳೆಯ ಮೊಬೈಲ್ ಕಸಿದುಕೊಂಡಿದ್ದನು. ಹಣ ಕಟ್ಟಿದ್ರೆ ಮಾತ್ರ ಮೊಬೈಲ್ ಕೊಡೋದಾಗಿ ಬ್ಯಾಂಕ್ ಸಿಬ್ಬಂದಿಗೆ ಮಹಿಳೆ ಅವಾಜ್ ಹಾಕಿದ್ದಾನೆ.
ಮೊಬೈಲ್ ಹೇಗೆ ಕಸಿದುಕೊಂಡ್ರಿ, ಮೊಬೈಲ್ ಕೊಟ್ರೆ ಮಾತ್ರ ಹಣ ಕೊಡುತ್ತೇನೆ ಎಂದು ಮಹಿಳೆ ಹೇಳುತ್ತಾಳೆ. ಈ ವೇಳೆ ಬ್ಯಾಂಕ್ ಸಾಲ ವಸೂಲಿ ಸಿಬ್ಬಂದಿ ಹಾಗೂ ಮಹಿಳೆ ಮಧ್ಯೆ ವಾಗ್ವಾದ ನಡೆದಿದೆ. ನೋಡ ನೋಡುತ್ತಿದ್ದಂತೆ ಮಹಿಳೆಯ ಕಪಾಳಕ್ಕೆ ಬ್ಯಾಂಕ್ ಸಿಬ್ಬಂದಿ ಕಪಾಳಕ್ಕೆ ಹೊಡೆದಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…