ಬೆಳಗಾವಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಥಳಿಸುವ ಮೂಲಕ ನೈತಿಕ ಪೊಲೀಸ್ಗಿರಿ ನಡೆಸಿದ್ದಾರೆ. ನಗರದ ಸುವರ್ಣಸೌಧದ ಮುಂಭಾಗದಲ್ಲಿಯೇ ಘಟನೆ ನಡೆದಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದ ಲಾರಿಯನ್ನು ಹೆದ್ದಾರಿಯಲ್ಲೇ ತಡೆದು ಕಲ್ಲು ತೂರಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಎಂದು ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಕಾಸರಗೋಡು ಮೂಲದ ಲಾರಿ ಚಾಲಕ ಉಮರ್ ಮೋಯಿದ್ದೀನ್ಗೆ ಕಾಲಿನಿಂದ ಒದ್ದು ಕಟ್ಟಿಗೆಯಿಂದಲೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡಿದ್ದು ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.