News Karnataka Kannada
Tuesday, April 30 2024
ಬೆಳಗಾವಿ

ಎಂಇಎಸ್‌ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು: ಸಿಎಂ ಬೊಮ್ಮಾಯಿ

Basavaraj Cm
Photo Credit :

ಬೆಳಗಾವಿ: ‘ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು’  ಈ ಬಾರಿ ನಾವು ಪ್ರಮುಖರನ್ನೇ ಬಂಧಿಸಿದ್ದೇವೆ. ಹಿಂದೆಲ್ಲ ಈ ಕೆಲಸ ಆಗಿರಲಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರು ಯಾರೇ ಇರಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಈ ಹಿಂದೆಲ್ಲ ಕಾಟಾಚಾರಕ್ಕೆ ಎನ್ನುವಂತೆ ಕೆಲವರನ್ನು ಬಂಧಿಸಿ ಬಿಡುಗಡೆ ಮಾಡಲಾಗುತ್ತಿತ್ತು.

‘ರಾಜ್ಯದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ನಿಯಂತ್ರಣ ಮಾಡುತ್ತಿದ್ದೇವೆ. ನಮ್ಮ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಅಲ್ಲಿರುವ ಕನ್ನಡಿಗರ ಆಸ್ತಿ, ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಮಾಡಿದ್ದಾರೆ. ಪುಂಡಾಟಿಕೆ ವಿರುದ್ಧ ನಿರ್ಣಾಯಕ ಕ್ರಮ ಖಚಿತ. ಅಂತಹ ಚಟುವಟಿಕೆಗಳನ್ನು ಮುಂದುವರಿಸಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು