ಬೆಳಗಾವಿ: ‘ಮಹಾರಾಷ್ಟ್ರದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಪ್ರಾದೇಶಿಕ ಭಾಷೆಯಾದ ಮರಾಠಿಯಲ್ಲಿಯೇ ಆಡಳಿತ ನಡೆಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಅಲ್ಲಿನ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಲಾಗಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ‘ಕರ್ನಾಟಕದಲ್ಲಿಯೂ ಇಂತಹ ಕಾನೂನು ತರಬೇಕು. ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲೂ ಕನ್ನಡದಲ್ಲಿಯೇ ಆಡಳಿತ ನಡೆಯಬೇಕು.ಮಹಾರಾಷ್ಟ್ರದ ಹೊಸ ಮಸೂದೆಯು ಕರ್ನಾಟಕ ಸರ್ಕಾರ ಕಣ್ಣು ತೆರೆಸಲಿ. ಕನ್ನಡವನ್ನು ಉಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಾದೇಶಿಕ ಭಾಷೆ ಉಳಿವಿಗೆ ಆ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.